CAA ಅನುಷ್ಠಾನವು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕೀಯ: ಕೇಜ್ರಿವಾಲ್ ಆಕ್ರೋಶ
ಪಾಕ್, ಅಫ್ಘಾನ್ ಮತ್ತು ಬಾಂಗ್ಲಾದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ...
Team Udayavani, Mar 13, 2024, 11:55 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕೀಯ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿ ಕಾರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜನರು ಈ ಕಾನೂನನ್ನು ರದ್ದುಗೊಳಿಸಬೇಕೆಂದು ಪ್ರತಿಪಾದಿಸಿದ್ದಾರೆ. ಈ ಕಾನೂನಿನ ಮೂಲಕ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಾಕಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಹೆಚ್ಚಿನ ಸಂಖ್ಯೆಯ ಬಡ ಅಲ್ಪಸಂಖ್ಯಾತರು ಭಾರತಕ್ಕೆ ಬರಲು ಪ್ರವಾಹದ ಬಾಗಿಲು ತೆರೆದಿದೆ’ ಎಂದರು.
ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಬಡ ವಲಸಿಗರಿಗೆ ಇಲ್ಲಿ ಮನೆ ಮತ್ತು ಉದ್ಯೋಗ ನೀಡುವ ಮೂಲಕ ನಮ್ಮ ಜನರ ಹಣವನ್ನು ಖರ್ಚು ಮಾಡಲು ಬಿಜೆಪಿ ಬಯಸಿದೆ” ಎಂದು ಆರೋಪಿಸಿದರು.
ನೆರೆಯ ರಾಷ್ಟ್ರಗಳ ಬಡ ಅಲ್ಪಸಂಖ್ಯಾತರು ಭಾರತದಲ್ಲಿ ನೆಲೆಯೂರುವುದರಿಂದ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಲಾಭವಾಗಲಿದೆ . ದೇಶವು ಸಿಎಎ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ ಮತ್ತು ಕಾನೂನನ್ನು ರದ್ದುಗೊಳಿಸದಿದ್ದರೆ ಬಿಜೆಪಿ ವಿರುದ್ಧ ಮತ ಚಲಾಯಿಸಲು ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆಯು ಡಿಸೆಂಬರ್ 31, 2014 ರ ಮೊದಲು ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಿಂದ ಭಾರತಕ್ಕೆ ಬಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ