ಸಚಿವಾಕಾಂಕ್ಷಿಗಳು ಮತ್ತೆ ಸದ್ದು ಮಾಡುವುದು ನಿಶ್ಚಿತ: ಸಂಪುಟಕ್ಕೆ ಸರ್ಜರಿ ಪಕ್ಕಾ?
Team Udayavani, Mar 5, 2022, 11:31 AM IST
ಬೆಂಗಳೂರು : ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸಂಪುಟ ವಿಸ್ತರಣೆ ತಲೆಬಿಸಿ ಆರಂಭವಾಗಲಿದೆ. ಇಷ್ಟು ದಿನಗಳ ಕಾಲ ಮೌನವಾಗಿದ್ದ ಸಚಿವಾಕಾಂಕ್ಷಿಗಳ ತಾಳ್ಮೆಯ ಕಟ್ಟೆ ಮಾರ್ಚ್10 ರ ನಂತರ ಒಡೆಯುವುದು ಗ್ಯಾರಂಟಿ ಎಂಬ ಮಾತು ಬಿಜೆಪಿ ಒಳಮನೆಯಿಂದ ಕೇಳಿ ಬರುತ್ತಿದೆ.
ಕಳೆದ ಎರಡು ತಿಂಗಳಿಂದ ಕೇಳಿ ಬರುತ್ತಿದ್ದ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಆಗ್ರಹಕ್ಕೆ ಪಂಚರಾಜ್ಯಗಳ ಚುನಾವಣೆ ಬ್ರೇಕ್ ಹಾಕಿದೆ.ಹಾಗೂ ಹೀಗೂ ವರಿಷ್ಠರ ಒಪ್ಪಿಗೆ ಪಡೆಯಲು ದಿಲ್ಲಿಗೆ ತೆರಳಿದ್ದ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹ ಸಚಿವ “ಗುರ್ ” ಎಂದು ಕಳುಹಿಸಿದ ಮೇಲೆ ಆಕಾಂಕ್ಷಿಗಳ ಕೂಗು ಕಡಿಮೆಯಾಗಿತ್ತು.ಆದರೆ ಬೊಮ್ನಾಯಿ ಬಜೆಟ್ ಅಧಿವೇಶನ ಹಾಗೂ ಪಂಚರಾಜ್ಯ ಚುನಾವಣಾ ಫಲಿತಾಂಶ ಹೆಚ್ಚುಕಡಿಮೆ ಒಂದೇ ವೇಳೆಗೆ ಮುಕ್ತಾಯವಾಗುವುದರಿಂದ ಸಚಿವಾಕಾಂಕ್ಷಿಗಳು ಮತ್ತೆ ಸದ್ದು ಮಾಡುವುದು ನಿಶ್ಚಿತ.
ಬಿಜೆಪಿ ಮೂಲಗಳ ಪ್ರಕಾರ ವರಿಷ್ಠರೂ ಕೂಡಾ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಅಥವಾ ಪುನಾರ್ರಚನೆ ಮಾಡಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ವಲಸೆ ಬಂದವರ ಪೈಕಿ ಕೆಲವರು ವಾಪಾಸ್ ಕಾಂಗ್ರೆಸ್ ಸೇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದ್ದು ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಹೆಚ್ಚು ಕಡಿಮೆ ಏಪ್ರೀಲ್ ಮೊದಲ ವಾರದ ವೇಳೆಗೆ ಕರ್ನಾಟಕದ ಎಲ್ಲ ಗೋಜಲುಗಳಿಗೆ ಅಂತ್ಯ ಹಾಡುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್