ಕಲ್ಕತ್ತ ಹೈಕೋರ್ಟ್-ಸುಪ್ರೀಂ ಜಟಾಪಟಿ
Team Udayavani, Apr 29, 2023, 7:47 AM IST
ಕೋಲ್ಕತಾ: ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ನ್ಯಾಯಮೂರ್ತಿ ಒಬ್ಬರನ್ನು ವಿಚಾರಣೆಯಿಂದ ಸುಪ್ರೀಂ ಕೋರ್ಟ್ ತೆಗೆದುಹಾಕಿದೆ. ಅದರ ವಿರುದ್ಧ ಕಲ್ಕತ್ತ ಹೈಕೋರ್ಟ್ ನ್ಯಾಯಮೂರ್ತಿ ಗರಂ ಆಗಿದ್ದಾರೆ. ಅಲ್ಲದೇ ತಮ್ಮನ್ನು ತೆಗದುಹಾಕಲು ಕಾರಣವಾದ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ನ ಹಿರಿಯ ಅಧಿಕಾರಿಗಳಿಗೇ ಆದೇಶ ನೀಡಿದ್ದಾರೆ.
ಇದಕ್ಕೆ ಸುಪ್ರೀಂ ತಡೆ ನೀಡಿದೆ! ಪಶ್ಚಿಮ ಬಂಗಾಲದ ಆಡಳಿತಾ ರೂಢ ಪಕ್ಷದ ಕೆಲವು ರಾಜಕಾರಣಿಗಳನ್ನೂ ಒಳಗೊಂಡಿರುವ ಉನ್ನತ ಶಿಕ್ಷಕರ ನೇಮಕಾತಿ ಹಗರಣದ ಪ್ರಕರಣವನ್ನು ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ವಿಚಾರಣೆ ನಡೆಸುತ್ತಿದ್ದರು. ಆದರೆ ಸುಪ್ರೀಂ ಕೋರ್ಟ್ ಅವರನ್ನು ವಿಚಾರಣೆಯಿಂದ ತೆಗೆದುಹಾಕಿದೆ. ವಿಚಾರಣೆ ಬಾಕಿ ಇರುವಾಗಲೇ ಆ ವಿಷಯದ ಕುರಿತು ಅಭಿಜಿತ್ ಟಿವಿ ಸಂದರ್ಶನದಲ್ಲಿ ಮಾತನಾಡಿರುವುದರಿಂದ ಇನ್ನುಮುಂದೆ ಅವರು ವಿಚಾರಣೆ ನಡೆಸುವಂತಿಲ್ಲ ಎಂದು ಸುಪ್ರೀಂ ತಿಳಿಸಿದೆ. ಸುಪ್ರೀಂ ಆದೇಶಕ್ಕೆ ಬದಲಾಗಿ, ಅಭಿಜಿತ್ ಶುಕ್ರವಾರ ಸಂಜೆ ಸುಪ್ರೀಂ ಕೋರ್ಟ್ನ ಹಿರಿಯ ಅಧಿಕಾರಿಗಳಿಗೆ ತಮ್ಮ ಭಾಷಣದ ಅನುವಾದದ ಪ್ರತಿ ಹಾಗೂ ತಮ್ಮನ್ನು ಪ್ರಕರಣದಿಂದ ಹೊರಗಿಡಲು ನೀಡಿರುವ ಅಸಲಿ ದಾಖಲೆಗಳನ್ನು ತಮ್ಮ ಮುಂದಿಡುವಂತೆ ಆದೇಶಿಸಿದ್ದಾರೆ. ಸುಪ್ರೀಂ ಕೋರ್ಟ್ ಶುಕ್ರವಾರ ಸಂಜೆ ವಿಶೇಷ ವಿಚಾರಣೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯವರ ಆದೇಶಕ್ಕೆ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ