ಕೋವಿಡ್ 19:ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ : ಕೇಂದ್ರಕ್ಕೆ ಕೇಜ್ರಿವಾಲ್ ಮನವಿ
Team Udayavani, Jun 1, 2021, 5:08 PM IST
ನವ ದೆಹಲಿ : ದೇಶದಲ್ಲಿನ ಕೋವಿಡ್ 19 ಸಾಂಕ್ರಾಮಿಕ ಸೋಂಕಿನ ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು(ಮಂಗಳವಾರ,ಜೂನ್ 1) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಕೋವಿಡ್ ಸೋಂಕಿನಿಂದ ಭಯ ಭೀತರಾಗಿದ್ದಾರೆ. ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಭಯಭೀತರಾಗಿದ್ದಾರೆ. ಲಸಿಕೆಗಳ ಕೊರತೆ ಇದೆ. ಕೋವಿಡ್ ಸೋಂಕಿನ ಎರಡನೇ ಅಲೆಯು ಪೋಷಕರಲ್ಲಿ ತುಂಬಾ ಭೀತಿ ಸೃಷ್ಟಿ ಮಾಡಿದೆ. ಲಸಿಕೆ ನೀಡದೇ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವಂತೆ ಮಾಡುವುದು ಅವರನ್ನು ಬೆಂಕಿಯೊಂದಿಗೆ ಆಟವಾಡಲು ಬಿಟ್ಟಂತೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕೋವಿಡ್ 19 : ಹೈದರಾಬಾದ್ ಗೆ ರಷ್ಯಾದಿಂದ ಬಂದಿಳಿಯಿತು 56.6 ಟನ್ ಸ್ಪುಟ್ನಿಕ್ ವಿ ಲಸಿಕೆ..!
ಈ ಕುರಿತಾಗಿ ಟ್ವಿಟ್ ಮಾಡಿರುವ ಕೇಜ್ರಿವಾಲ್, ವ್ಯಾಕ್ಸಿನೇಷನ್ ಆಗದೇ ಪರೀಕ್ಷೆಯನ್ನು ನಡೆಸಬಾರದು ಎಂದು ಪೋಷಕರು ಬಯಸುತ್ತಾರೆ. ಮಕ್ಕಳು ಮತ್ತು ಪೋಷಕರು ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ತುಂಬಾ ಚಿಂತಿತರಾಗಿದ್ದಾರೆ ಎಂದು ಹೇಳಿದ್ದಾರೆ.
12वीं की परीक्षा को लेकर बच्चे और पेरंट्स काफ़ी चिंतित हैं। वे चाहते हैं कि बिना वैक्सिनेशन, 12वी की परीक्षा नहीं होनी चाहिए
मेरी केंद्र सरकार से अपील है कि 12वीं की परीक्षा रद्द की जाए। पिछले performance के आधार पर उन्हें आँकलन किया जाए।
— Arvind Kejriwal (@ArvindKejriwal) June 1, 2021
ಇನ್ನು, ಸರ್ಕಾರ ಹಾಗೂ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಪೂರ್ವ ಪರೀಕ್ಷೆ ಹಾಗೂ ಶೈಕ್ಷಣಿಕ ಆತಂರಿಕ ಪರೀಕ್ಷೆ, ಚಟುವಟಿಕೆಗಳನ್ನು ಆಧರಿಸಿ ತೇರ್ಗಡೆ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಸಿಬಿಎಸ್ಇ ಏಪ್ರಿಲ್ 14 ರಂದು 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡುವುದಾಗಿ ಘೋಷಿಸಿತ್ತು.
ಇದನ್ನೂ ಓದಿ : ವಿಡಿಯೋ ವೈರಲ್ : ಮದುವೆ ಸಮಾರಂಭದಲ್ಲಿಯೇ ಗುಂಡು ಹಾರಿಸಿದ ವಧು : FIR ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ