ಎಸಿಬಿ ರದ್ದು; ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ: ಸಿಎಂ ಬೊಮ್ಮಾಯಿ
Team Udayavani, Aug 23, 2022, 5:06 PM IST
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆಯೇ ಹೊರತು ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಎಸಿಬಿ ವಿಚಾರವಾಗಿ ಹೈಕೋರ್ಟ್ ಆದೇಶ ಪಾಲನೆ ಪ್ರಕ್ರಿಯೆ ಆರಂಭವಾಗಿದೆ. ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿಲ್ಲ. ಖಾಸಗಿ ವ್ಯಕ್ತಿ ಮೇಲ್ಮನವಿ ಹಾಕಿರುವುದಕ್ಕೂ ಸರಕಾರದ ನಿಲುವಿಗೂ ಸಂಬಂಧವಿಲ್ಲ ಎಂದು ಸಿಎಂ ಹೇಳಿದ್ದಾರೆ.
ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಹೈಕೋರ್ಟ್ ತೀರ್ಪು ನೀಡಿ, ಎಸಿಬಿ ರಚನೆ ಆದೇಶವನ್ನು ರದ್ದು ಮಾಡಿ, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶಿಸಿತ್ತು.