ರೈಲುಗಳ ರದ್ದು: ಹಿಂಪಾವತಿಗೆ ನಿಲ್ದಾಣಗಳಲ್ಲಿ ನೂಕುನುಗ್ಗಲು


Team Udayavani, Jun 4, 2023, 7:56 AM IST

Udayavani Kannada Newspaper

ಬೆಂಗಳೂರು: ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಮಾರ್ಗ ಬದಲಾವಣೆ ಜತೆಗೆ ಹಲವು ರೈಲುಗಳ ಸೇವೆ ರದ್ದುಪಡಿಸಲಾಗಿದೆ. ಇದರ ಬೆನ್ನಲ್ಲೇ ಟಿಕೆಟ್‌ ಹಣ ವಾಪಸ್‌ ಪಡೆಯಲು ಸರ್‌ ಎಂ. ವಿಶ್ವೇಶ್ವರಯ್ಯ ಬೆಂಗಳೂರು ಟರ್ಮಿನಲ್‌ (ಎಸ್‌ಎಂವಿಬಿ)ನಲ್ಲಿ ಶನಿ
ವಾರ ನೂಕುನುಗ್ಗಲು ಉಂಟಾಯಿತು.

ಕಳೆದೆರಡು ದಿನಗಳು ಬೆಂಗಳೂರಿನಿಂದ ಹೋಗಬೇಕಾದ ನಾಲ್ಕು ರೈಲುಗಳ ಸೇವೆ ರದ್ದಾಗಿದ್ದರೆ, ಐದು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರಲ್ಲಿ ಕೆಲವರು ಆನ್‌ಲೈನ್‌ ಮೂಲಕ ಟಿಕೆಟ್‌ಗಳನ್ನು ಬುಕಿಂಗ್‌ ಮಾಡಿಕೊಂಡಿದ್ದರೆ, ನೂರಾರು ಜನ ನೇರವಾಗಿ ನಿಲ್ದಾಣಕ್ಕೆ ಬಂದು ಹಣ ಪಾವತಿಸಿ ಟಿಕೆಟ್‌ ಖರೀದಿಸಿದವರಿದ್ದಾರೆ. ಅಲ್ಲದೆ, ಕಾಯ್ದಿರಿಸದ ಟಿಕೆಟ್‌ ಪಡೆದವರೂ ಇದ್ದಾರೆ. ಆನ್‌ಲೈನ್‌ ಮೂಲಕ ಟಿಕೆಟ್‌ ಪಡೆದವರಿಗೆ ಆಯಾ ಖಾತೆಗೆ ಹಣ ಹಿಂಪಾವತಿ ಆಗುತ್ತಿದೆ. ಉಳಿದವರು ಶನಿವಾರ ನಿಲ್ದಾಣದ ಮುಂದೆ ಕಾದುಕುಳಿತಿರುವುದು ಕಂಡುಬಂತು.

ಬೆಳಿಗ್ಗೆಯಿಂದಲೇ ಜನ ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ಕೌಂಟರ್‌ಗಳ ಮುಂದೆ ಮುಗಿಬಿದ್ದಿದ್ದರು. ಅದರಲ್ಲಿ ಬಹುತೇಕರು ಕಾರ್ಮಿಕ ವರ್ಗದವರಾಗಿದ್ದರು. ಒಂದೆಡೆ ಲಭ್ಯವಿರುವ ರೈಲುಗಳ ಪ್ರಯಾಣಿಕರಿಗೆ ಟಿಕೆಟ್‌ ವಿತರಣೆ ಮತ್ತೂಂದೆಡೆ ಏಕಕಾಲದಲ್ಲಿ ಜನ ಹಿಂಪಾವತಿಗಾಗಿ ಧಾವಿಸಿದ್ದರಿಂದ ನಿಲ್ದಾಣದಲ್ಲಿ ದಟ್ಟಣೆ ಉಂಟಾಯಿತು. ಇದನ್ನು ನಿಭಾಯಿಸಲು ರೈಲ್ವೆ ಸಿಬ್ಬಂದಿ ಹರಸಾಹಸ ಮಾಡಬೇಕಾಯಿತು.

ಈ ಮಧ್ಯೆ ಮಾರ್ಗ ಬದಲಾವಣೆ ಮಾಡಿರುವ ರೈಲುಗಳ ಪ್ರಯಾಣಿಕರಲ್ಲೂ ಕೆಲವರು ತಮ್ಮ ಪ್ರಯಾಣವನ್ನೇ ರದ್ದುಗೊಳಿಸಿ, ಹಣ ವಾಪಸ್‌ ನೀಡುವಂತೆ ಸರದಿಯಲ್ಲಿ ನಿಂತಿರುವುದು ಕಂಡುಬಂತು. ಇದರಿಂದ ತುಸು ಗೊಂದಲದ ವಾತಾವರಣ ಉಂಟಾಯಿತು. ಶನಿವಾರ ಸುಮಾರು ಸಾವಿರ ಜನ ಟರ್ಮಿನಲ್‌ನಲ್ಲಿ ಜಮಾಯಿಸಿದ್ದರು. ತಾಸುಗಟ್ಟಲೆ ಕಾದುಕುಳಿತು, ಹಣ ಪಡೆದು ಮನೆಗಳಿಗೆ ಹಿಂತಿರುಗಿದರು.

697 ಟಿಕೆಟ್‌ ರದ್ದು; 5.23 ಲಕ್ಷ ರೂ. ಹಿಂಪಾವತಿ
ಶುಕ್ರವಾರ ಎಸ್‌ಎಂವಿಬಿಯಿಂದ ಗುವಾಹಟಿ (ರೈಲು ಸಂಖ್ಯೆ 12509)ಗೆ ಹೊರಡಬೇಕಿದ್ದ ರೈಲು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಆನ್‌ಲೈನ್‌ ಮೂಲಕ ಬುಕಿಂಗ್‌ ಆಗಿದ್ದ 345 ಪ್ರಯಾಣಿಕರ 170 ಟಿಕೆಟ್‌ಗಳನ್ನು ರದ್ದುಪಡಿಸಿ, 4.52 ಲಕ್ಷ ರೂ.ಗಳನ್ನು ಆಯಾ ಪ್ರಯಾಣಿಕರಿಗೆ ಹಿಂಪಾವತಿ ಮಾಡಲಾಗಿದೆ. ಅದೇ ರೀತಿ, 529 ಪ್ರಯಾಣಿಕರ 527 ಟಿಕೆಟ್‌ಗಳನ್ನು ರದ್ದುಗೊಳಿಸಿ 2.71 ಲಕ್ಷ ರೂ. ಆಯಾ ಪ್ರಯಾಣಿಕರಿಗೆ ನೀಡಲಾಗಿದೆ ಎಂದು ನೈರುತ್ಯ ರೈಲ್ವೇ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.