ಲೋಕಾಯುಕ್ತ ತನಿಖೆಗೆ ನೀಡಬಹುದಲ್ಲವೇ: ಹೆಚ್ ಡಿಕೆ ಗೆ ಸಚಿವ ನಾಗೇಶ್ ಪ್ರಶ್ನೆ
ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣ
Team Udayavani, Sep 26, 2022, 9:37 PM IST
ಹುಮನಾಬಾದ್ : ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ದಾಖಲೆಗಳ ಸಹಿತ ಪತ್ರ ಬರೆಯುವುದಾಗಿ ಹೇಳಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಗೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜ್ಯದಲ್ಲಿ ಲೋಕಾಯುಕ್ತ ಇದ್ದು, ತನಿಖೆಗೆ ನೀಡಬಹುದಲ್ಲವೇ ಎಂದು ಮರು ಪ್ರಶ್ನೆಮಾಡಿದ್ದಾರೆ.
ಸೋಮವಾರ ಸಂಜೆ ತಾಲೂಕಿನ ಮಾಣಿಕ್ ನಗರದ ಮಾಣಿಕ್ ಪ್ರಭು ಸಂಸ್ಥಾನಕ್ಕೆ ಭೇಟಿ ನೀಡಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಅನೇಕ ತನಿಖಾ ಸಂಸ್ಥೆಗಳು ಇವೆ ಯಾವುದರ ಮೂಲಕ ಬೇಕಾದರೂ ತನಿಖೆ ನಡೆಸಬಹುದು. ಮಾಜಿ ಮುಖ್ಯಮಂತ್ರಿಗಳು ಇದ್ದಾರೆ ಅವರಿಗೆ ಎಲ್ಲಾನು ತಿಳಿದಿದೆ ಎಂದರು. ಶಿಕ್ಷಣ ಗುಣಮಟ್ಟ ಸುಧಾರಣೆ ಹಿನ್ನೆಲೆಯಲ್ಲಿ ಸಾಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಸುವ ಯೋಜನೆ ಸರಕಾರದ ಮುಂದೆ ಇದೆ ಎಂದರು.
ಇದಕ್ಕೂ ಮುನ್ನ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ದೆಹಲಿ ಮಾದರಿ ಶಾಲೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಪ್ರಭುಗಳ ಹಾಗೂ ಡಾ। ಜ್ಞಾನರಾಜ ಮಾಣಿಕ ಪ್ರಭುಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಡಾ। ಚಂದ್ರಶೇಖರ ಪಾಟೀಲ, ಬಿಜೆಪಿ ಯುವ ಮುಖಂಡ ಡಾ। ಸಿದ್ದಲಿಂಗಪ್ಪ ಪಾಟೀಲ ಸೇರಿದಂತೆ ಅನೇಕ ಮುಖಂಡರು ಹಾಗೂ ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.