ಕುತುಬ್ ಮಿನಾರ್ ಉತ್ಖನನಕ್ಕೆ ಅವಕಾಶ ನೀಡಲ್ಲ: ಕೋರ್ಟ್ ಗೆ ಎಎಸ್ಐ ಲಿಖಿತ ಉತ್ತರ
ಕುತುಬ್ ಮಿನಾರ್ ಸಂಕೀರ್ಣ 1914ರಿಂದ ಸಂರಕ್ಷಿತ ಸ್ಮಾರಕವಾಗಿದೆ.
Team Udayavani, May 24, 2022, 11:57 AM IST
ನವದೆಹಲಿ: ಜ್ಞಾನವಾಪಿ ಮಸೀದಿ ಬಳಿಕ ದಿಲ್ಲಿಯ ಜಗದ್ವಿಖ್ಯಾತ ಕುತುಬ್ ಮಿನಾರ್ ಕೂಡಾ ಹಿಂದೂ ಸ್ಮಾರಕ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ (ಎಎಸ್ ಐ) ಮಂಗಳವಾರ (ಮೇ 24) ಸಾಕೇತ್ ಕೋರ್ಟ್ ಗೆ ಸಲ್ಲಿಸಿರುವ ಲಿಖಿತ ಉತ್ತರದಲ್ಲಿ, ಕುತುಬ್ ಮಿನಾರ್ ಪ್ರದೇಶದಲ್ಲಿನ ದೇವಾಲಯ ಪುನರೂರ್ಜಿತಗೊಳಿಸುವುದಾಗಲಿ, ಉತ್ಖನನ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಕೋರ್ಟ್ ಗೆ ಸಲ್ಲಿಸಿದ ಉತ್ತರದಲ್ಲೇನಿದೆ?
ಕುತುಬ್ ಮಿನಾರ್ 1914ರಿಂದಲೂ ಸಂರಕ್ಷಿತ ಸ್ಮಾರಕವಾಗಿದೆ. ಅಲ್ಲದೇ ಕುತುಬ್ ಮಿನಾರ್ ಸ್ಮಾರಕವನ್ನು ಈಗ ಬದಲಾಯಿಸಲು ಸಾಧ್ಯವಿಲ್ಲ. ಸ್ಮಾರಕಕ್ಕೆ ಸಂರಕ್ಷಿತ ಸ್ಥಾನಮಾನ ನೀಡಿರುವ ಸಂದರ್ಭದಲ್ಲಿ ಸ್ಮಾರಕದೊಳಗೆ ಪೂಜೆ ಅಥವಾ ಉತ್ಖನನ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಲಿಖಿತ ಉತ್ತರದಲ್ಲಿ ಹೇಳಿದೆ.
ಇದನ್ನೂ ಓದಿ:ಬದಲಾಯ್ತು ಬಿಜೆಪಿ ಪಟ್ಟಿ: ಲಕ್ಷ್ಮಣ ಸವದಿ, ಹೇಮಲತಾ ನಾಯಕ್ ಗೆ ಪರಿಷತ್ ಟಿಕೆಟ್
ಹಿಂದೂ ಪರ ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರವಾಗಿ ನಿರ್ವಹಿಸಲು ಸಾಧ್ಯವಿಲ್ಲ. ಕುತುಬ್ ಮಿನಾರ್ ಸಂಕೀರ್ಣವನ್ನು ಕಟ್ಟಲು ಪುರಾತನ ದೇವಾಲಯವನ್ನು ನಾಶಪಡಿಸಿರುವುದು ಐತಿಹಾಸಿಕ ಸತ್ಯವಾಗಿದೆ. ಕುತುಬ್ ಮಿನಾರ್ ಸಂಕೀರ್ಣ 1914ರಿಂದ ಸಂರಕ್ಷಿತ ಸ್ಮಾರಕವಾಗಿದೆ. ಈ ನಿಟ್ಟಿನಲ್ಲಿ ಕುತುಬ್ ಮಿನಾರ್ ಸಂಕೀರ್ಣದೊಳಗೆ ಪೂಜೆ ಸಲ್ಲಿಸುವ ಹಕ್ಕು ಯಾರಿಗೂ ಇಲ್ಲ ಎಂದು ತಿಳಿಸಿದೆ.
ಕುತುಬ್ ಮಿನಾರ್ ಅನ್ನು ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಬೇಕು. ಇದು ಕೂಡಾ ಹಿಂದೂ ದೇವಾಲಯವಾಗಿರುವುದಾಗಿ ಹಿಂದೂ ಸಂಘಟನೆಗಳು ಎರಡು ವಾರಗಳ ಹಿಂದೆ ಪ್ರತಿಭಟನೆ ನಡೆಸಿದ್ದವು. ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಾಜಿ ಅಧಿಕಾರಿ ಧರಮ್ ವೀರ್ ಶರ್ಮಾ ಎಂಬುವರು, ಇದು ಕುತ್ಬುದ್ದೀನ್ ಐಬಕ್ ಕಟ್ಟಿಸಿದ ಮಿನಾರ್ ಅಲ್ಲ, ರಾಜಾ ವಿಕ್ರಮಾದಿತ್ಯ ಕಟ್ಟಿದ ಸೂರ್ಯ ಗೋಪುರ ಎಂದು ಹೇಳಿದ್ದರು.
ಈ ವಿವಾದದ ನಂತರ ಕೇಂದ್ರ ಸಂಸ್ಕೃತಿ ಸಚಿವಾಲಯ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಮೇ 21ರಂದು ಐತಿಹಾಸಿಕ ಸ್ಮಾರಕಕ್ಕೆ ನಾಲ್ವರು ಎಎಸ್ ಐ ಅಧಿಕಾರಿಗಳು ಹಾಗೂ ಸಂಶೋಧಕರ ಜತೆ ಭೇಟಿ ನೀಡಿದ್ದ ಬೆನ್ನಲ್ಲೇ ಉತ್ಖನನ ನಡೆಸುವಂತೆ ಸಂಸ್ಕೃತಿ ಸಚಿವಾಲಯ ಎಎಸ್ ಐಗೆ ಸೂಚನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ