ವಾಕಿಂಗ್ ಹೋದವರಿಗೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರು ಸಾವು, ಓರ್ವ ಮಹಿಳೆ ಗಂಭೀರ
Team Udayavani, May 25, 2020, 10:56 AM IST
ಬೆಳಗಾವಿ: ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯರ ಮೇಲೆ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮುತಗಾ-ನಿಲಜಿ ಗ್ರಾಮದ ಮಧ್ಯದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮುತಗಾ ಗ್ರಾಮದ ಪ್ರಭಾವತಿ ಕಾಲೋನಿಯ ಸವಿತಾ ಬಾಲಕೃಷ್ಣ ಪಾಟೀಲ (44), ವಿದ್ಯಾ ಭಾವು ಪಾಟೀಲ (48) ಮೃತಪಟ್ಟಿದ್ದಾರೆ. ಶಾಂತಾ ಕೃಷ್ಣಾ ಚೌಗಲೆ (55) ಗಂಭೀರ ಗಾಯಗೊಂಡಿದ್ದಾಳೆ.
ರವಿವಾರ ರಾತ್ರಿ ಬೆಳಗಾವಿಯಿಂದ ಸಾಂಬ್ರಾ ಕಡೆಗೆ ಬಿಜೆಪಿ ಯುವ ಮೋರ್ಚಾ ಮುಖಂಡ ಯುವರಾಜ ಜಾಧವ ಎಂಬಾತ ಕಾರು ಚಲಾಯಿಸಿಕೊಂಡು ಬರುತಿದ್ದಾಗ ಕಾರು ನಿಯಂತ್ರಣ ತಪ್ಪಿದೆ ಈ ಸಂದರ್ಭ ರಸ್ತೆ ಪಕ್ಕದಲ್ಲಿ ವಾಕಿಂಗ್ ಮಾಡುತಿದ್ದ ಮೂವರು ಮಹಿಳೆಯರಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ಮನೆಯೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಕಾರು ಚಲಾಯಿಸುತ್ತಿದ್ದ ಜಾಧವ ಕೂಡ ಗಾಯಗೊಂಡಿದ್ದಾನೆ ಎಂದು ಎಂದು ಡಿಸಿಪಿ ಯಶೋದಾ ವಂಟಗೋಡಿ ತಿಳಿಸಿದ್ದಾರೆ.
ಮೃತಪಟ್ಟ ವಿದ್ಯಾ ಪಾಟೀಲನಪತಿ ಕೇರಳದ ಕೊಚ್ಚಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನುಳಿದ ಮೃತ ಸವಿತಾ ಹಾಗೂ ಗಂಭೀರ ಗಾಯಗೊಂಡ ಶಾಂತಾ ಅವರ ಪತಿ ಮಾಜಿ ಸೈನಿಕರಾಗಿದ್ದಾರೆ.
ಸ್ಥಳಕ್ಕೆ ಅಪರಾಧ ವಿಭಾಗ ಡಿಸಿಪಿ ಯಶೋದಾ ವಂಟಗೋಡಿ, ಗ್ರಾಮಿಣ ಎಸಿಪಿ ಶಿವಾರೆಡ್ಡಿ, ಮಾರೀಹಾಳ ಠಾಣೆ ಇನ್ಸ್ಪೆಕ್ಟರ್ ವಿಜಯಕುಮಾರ ಸಿನ್ನೂರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ