ಕಲಬುರಗಿ: ಮರಕ್ಕೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಐವರ ದುರ್ಮರಣ
ದೇವರ ದರ್ಶನ ಪಡೆದು ಮಹಾರಾಷ್ಟ್ರ ಕ್ಕೆ ವಾಪಸ್ಸಾಗುತ್ತಿದ್ದರು
Team Udayavani, Mar 11, 2022, 7:10 PM IST
ಕಲಬುರಗಿ: ಮರಕ್ಕೆ ಕಾರು ಢಿಕ್ಕಿ ಹೊಡೆದ ಸಂಭವಿಸಿದ ಭೀಕರ ಅವಘಡದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿಮೃತಪಟ್ಟ ಘಟನೆ ಅಫಜಲಪುರ- ದುಧನಿ ನಡುವಿನ ಬಳೂರ್ಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲ್ ಗಾಣಗಾಪುರ ದತ್ತಾತ್ರೇಯ ದರ್ಶನ ಪಡೆದು ಮಹಾರಾಷ್ಟ್ರ ಕ್ಕೆ ವಾಪಸ್ಸಾಗುತ್ತಿದ್ದ ಅಹಮದ ನಗರದವರು ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
ಗಾಣಗಾಪುರದ ದತ್ತಾತ್ರೇಯನ ದರ್ಶನ ಮುಗಿಸಿಕೊಂಡು ಮರಳುವಾಗ ಅವಘಡ ಸಂಭವಿಸಿದ್ದು, ಚಾಲಕ ಸೇರಿದಂತೆ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಅಫಜಲಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಐವರ ಬದಲು ಮಕ್ಕಳು ಸೇರಿ ಒಂಭತ್ತು ಜನ ಪ್ರಯಾಣಿಸುತ್ತಿದ್ದರು.
ದೇವಲ್ ಗಾಣಗಾಪುರದಿಂದ ದತ್ತಾತ್ರೇಯ ದರ್ಶನ ಪಡೆದು ಮಹಾರಾಷ್ಟ್ರಕ್ಕೆ ವಾಪಾಸ್ ಆಗುತ್ತಿದ್ದ ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು, ಚಾಲಕ ಸೇರಿದ್ದು, ಘಟನಾ ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ