ಮದುವೆ ಆಹ್ವಾನ ಪತ್ರಿಕೆ ನೀಡಲು ತಂದಿದ್ದ ಕಾರನ್ನೇ ಕದ್ದೊಯ್ದ ಕಳ್ಳರು
Team Udayavani, Jan 26, 2021, 12:21 PM IST
ಯಳಂದೂರು: ಆಹ್ವಾನ ಪತ್ರಿಕೆ ನೀಡಲು ದೂರದ ತಮಿಳುನಾಡಿನ ಕೊಯಮತ್ತೂರಿನಿಂದ ತಂದಿದ್ದ ಕಾರನ್ನು ರಾತ್ರೋರಾತ್ರಿ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಮೆಳ್ಳಹಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಯಮತ್ತೂರಿನಲ್ಲಿರುವ ವೆಂಕಟೇಶಕೀರ್ತಿ ಎಂಬುವವರು ತಮ್ಮ ತಂಗಿಯ ವಿವಾಹ ಆಹ್ವಾನ ಪತ್ರಿಕೆಯನ್ನು ನೀಡಲು ಶನಿವಾರ ಸಂಜೆ ಯಳಂದೂರಿಗೆ ಬಂದಿದ್ದಾರೆ. ಇಲ್ಲಿನ ಮೀರೆ ಸಿದ್ದರಾಜು ಎಂಬುವವರಿಗೆ ಆಹ್ವಾನ ಪತ್ರಿಕೆ ನೀಡಿ ನಂತರ ಮೆಳ್ಳಹಳ್ಳಿ ಗ್ರಾಮದಲ್ಲಿರುವ ತಮ್ಮ ಅಜ್ಜಿ ಮನೆಗೆ ತೆರಳಿದ್ದಾರೆ. ಸಂಜೆಯಾಗಿದ್ದರಿಂದ ಅಲ್ಲೇ ವಾಸ್ತವ್ಯ ಹೂಡಿ ತಮ್ಮ ಅಜ್ಜಿ ಮನೆಯಲ್ಲಿ ತಂಗಿದ್ದಾರೆ.
ಮನೆ ಮುಂಭಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ಮಧ್ಯರಾತ್ರಿ ಕಳ್ಳರು ಬಂದು ಕಾರನ್ನು ಕದ್ದು ಪರಾರಿಯಾಗಿದ್ದಾರೆ.
ವೆಂಕಟೇಶಕೀರ್ತಿ ತಮ್ಮ ಸ್ನೇಹಿತ ತಮಿಳುನಾಡಿದ ಗುಣಶೇಖರ್ಗೆ ಸೇರಿದ ಮಾರುತಿ ಸ್ವಿಫ್ಟ್ ಟಿ.ಎನ್. 38 ಬಿ.ಪಿ 3555 ಸಂಖ್ಯೆ ಕಾರಿನಲ್ಲಿ ಬಂದಿದ್ದರು. ಆದರೆ ರಾತ್ರೋರಾತ್ರಿ ಕಾರು ಕಳ್ಳತನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ಲಂಚ ಪ್ರಕರಣ: ಕಂದಾಯ ಸಚಿವ ಅಶೋಕ್ ಪಿಎ ವಿರುದ್ಧ ದೂರು ದಾಖಲು
ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಕ್ರಮ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ