ಬಾಲ್ಯ ವಿವಾಹಕ್ಕೆ ಊಟ ಪೂರೈಸಿದರೂ ಕೇಸ್! ರಾಜಸ್ಥಾನ ಸರಕಾರ ಕಟ್ಟಾಜ್ಞೆ
Team Udayavani, Apr 10, 2021, 7:10 AM IST
ಜೈಪುರ: ಮೇ 14ರ ಈ ಬಾರಿಯ ಅಕ್ಷಯ ತೃತೀಯದ ವಿವಾಹ ಸಮಾರಂಭಗಳಿಗೆ ರಾಜಸ್ಥಾನ ಸರಕಾರ ಕಟ್ಟಾಜ್ಞೆ ಜಾರಿಗೊಳಿಸಿದ್ದು, ಈ ಮೂಲಕ ಬಾಲ್ಯ ವಿವಾಹ ಕಡಿವಾಣದ ಶಪಥ ತೊಟ್ಟಿದೆ.
ಬಾಲ್ಯ ವಿವಾಹಗಳ ಸೂತ್ರಧಾರರ ವಿರುದ್ಧ ಮಾತ್ರವಲ್ಲದೆ ಮದುವೆಗೆ ಊಟ ಪೂರೈಸಿದ ಕೇಟರಿಂಗ್ನವರ ಮೇಲೂ ಕೇಸು ದಾಖಲಿಸಲು ಆದೇಶ ನೀಡಲಾಗಿದೆ. ಅಷ್ಟೇ ಅಲ್ಲದೆ, ಅಂಥ ವಿವಾಹದಲ್ಲಿ ಪಾಲ್ಗೊಳ್ಳುವ ಅತಿಥಿಗಳು, ಅಡುಗೆ ಸಿಬಂದಿ, ಪುರೋಹಿತರು, ಬ್ಯಾಂಡ್ನವರು, ಟೆಂಟ್ನವರೆಲ್ಲರ ಮೇಲೂ ಕೇಸ್ ಬೀಳಲಿದೆ ಎಂದು ಸರಕಾರ ಎಚ್ಚರಿಸಿದೆ.
ಜನ್ಮದಿನಾಂಕ ನಮೂದು ಕಡ್ಡಾಯ: ಪ್ರತಿಯೊಂದು ಬಾಲ್ಯ ವಿವಾಹಗಳ ಆಮಂತ್ರಣ ಕಾರ್ಡ್ನಲ್ಲಿ ವಧು- ವರರ ಹುಟ್ಟಿದ ದಿನಾಂಕ ಮುದ್ರಿಸಲು ಸೂಚಿಸಿದೆ. ಅಲ್ಲದೆ, ಆಹ್ವಾನ ಪತ್ರಿಕೆ ಮುದ್ರಿಸುವ ಪ್ರಿಂಟಿಂಗ್ ಪ್ರಸ್ಗಳಿಗೆ ಜೋಡಿ ತಮ್ಮ ಜನನ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯಗೊಳಿಸಿದೆ. ಒಂದು ವೇಳೆ ವಧುವಿಗೆ 18 ವರ್ಷ ಪೂರ್ಣಗೊಳ್ಳದೇ ಇದ್ದಲ್ಲಿ ವಧು- ವರನ ಕಡೆಯವರ ಮೇಲೆ ಮೊಕದ್ದಮೆ ದಾಖಲಿಸಲಾಗುತ್ತದೆ.
ಸಮಯೋಚಿತ ಆದೇಶ: ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿ ನಲ್ಲಿ ರಾಜಸ್ಥಾನ ಗೃಹ ಇಲಾಖೆ ಕಠಿಣ ನಿಯಮ ಜಾರಿಗೊಳಿಸಿದೆ. ಮೇ 14 ರಂದು ಅಕ್ಷಯ ತೃತೀಯ, ಪೀಪಲ್ ಪೂರ್ಣಿಮಾ ಮೇ 26ರಂದು ನಡೆ ಯಲಿದೆ. ಈ ಸಂದರ್ಭಕ್ಕೆ ಅನುಸಾರವಾಗಿ ಹೆಚ್ಚಿನ ಮದುವೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಈ ಆದೇಶ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ