ಡಿಎಲ್ ಎಫ್ ಲಂಚ ಪ್ರಕರಣ: ಸಿಬಿಐನಿಂದ ಲಾಲುಪ್ರಸಾದ್ ಯಾದವ್ ಗೆ ಕ್ಲೀನ್ ಚಿಟ್ ?
ಡಿಎಲ್ ಎಫ್ ಮಾಜಿ ರೈಲ್ವೆ ಸಚಿವೆ ಲಾಲು ಪ್ರಸಾದ್ ಯಾದವ್ ಗೆ ಲಂಚ ರೂಪದಲ್ಲಿ ನೀಡಿರುವುದಾಗಿ ವರದಿ ತಿಳಿಸಿದೆ.
Team Udayavani, May 22, 2021, 10:41 AM IST
ನವದೆಹಲಿ: ಡಿಎಲ್ ಎಫ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೆ ಸಚಿವ, ರಾಷ್ಟ್ರೀಯ ಜನತಾದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ಕ್ಲೀನ್ ಚಿಟ್ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಮೂರು ವರ್ಷಕ್ಕಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ ನಂತರ ಏಪ್ರಿಲ್ ನಿಂದ ಜಾಮೀನಿನಲ್ಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಡಾಮಿನೋಸ್ ಡೇಟಾಗಳು ಡಾರ್ಕ್ ವೆಬ್ ನಲ್ಲಿ ಸೋರಿಕೆ: ಸೈಬರ್ ಪರಿಣಿತರು ಹೇಳುವುದೇನು ?
ಸಿಬಿಐನ ಆರ್ಥಿಕ ಅಪರಾಧ ಬ್ರ್ಯಾಂಚ್ ನ ಮೂಲಗಳ ಪ್ರಕಾರ, ಭ್ರಷ್ಟಾಚಾರ ಆರೋಪದ ಮೇಲೆ ರಿಯಲ್ ಎಸ್ಟೇಟ್ ಗ್ರೂಪ್ ಡಿಎಲ್ ಎಫ್ ಹಾಗೂ ಲಾಲು ಪ್ರಸಾದ್ ವಿರುದ್ಧ 2018ರಲ್ಲಿ ಪ್ರಾಥಮಿಕ ತನಿಖೆ ಆರಂಭಿಸಿರುವುದಾಗಿ ವಿವರಿಸಿದೆ.
ಮುಂಬೈನ ಬಾಂದ್ರಾದ ರೈಲ್ವೆ ಭೂ ಗುತ್ತಿಗೆ ಯೋಜನೆ ಮತ್ತು ನವದೆಹಲಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವ ಯೋಜನೆ ಮೇಲೆ ಡಿಎಲ್ ಎಫ್ ಗ್ರೂಪ್ ಕಣ್ಣಿಟ್ಟಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ದೆಹಲಿ ಪ್ರದೇಶದಲ್ಲಿನ ಆಸ್ತಿಯನ್ನು ಡಿಎಲ್ ಎಫ್ ಮಾಜಿ ರೈಲ್ವೆ ಸಚಿವೆ ಲಾಲು ಪ್ರಸಾದ್ ಯಾದವ್ ಗೆ ಲಂಚ ರೂಪದಲ್ಲಿ ನೀಡಿರುವುದಾಗಿ ವರದಿ ತಿಳಿಸಿದೆ.
ಸಿಬಿಐ ಮೂಲಗಳು ಎನ್ ಡಿಟಿವಿಗೆ ತಿಳಿಸಿರುವಂತೆ, ಈ ಪ್ರಕರಣದ ಬಗ್ಗೆ ಎರಡು ವರ್ಷಗಳ ಕಾಲ ಪ್ರಾಥಮಿಕ ತನಿಖೆಯನ್ನು ನಡೆಸಿ ಮುಕ್ತಾಯಗೊಳಿಸಲಾಗಿದೆ. ಈ ಆರೋಪ ಸಾಬೀತುಪಡಿಸುವ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ಸಿಬಿಐ ತಿಳಿಸಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ