ಬಿರ್ ಭೂಮ್ 8 ಜನರ ಸಜೀವ ದಹನ ಪ್ರಕರಣ; 21 ಆರೋಪಿಗಳನ್ನು ಹೆಸರಿಸಿದ ಸಿಬಿಐ
ಪಶ್ಚಿಮಬಂಗಾಲ ಸರಕಾರವು ಸಿಬಿಐಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೈಕೋರ್ಟ್ ಸಲಹೆ ನೀಡಿತ್ತು.
Team Udayavani, Mar 26, 2022, 2:33 PM IST
ಕೋಲ್ಕತಾ: ಇತ್ತೀಚೆಗೆ ನಡೆದ ಬಿರ್ ಭೂಮ್ ಹಿಂಸಾಚಾರ ಮತ್ತು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಕೇಂದ್ರೀಯ ತನಿಖಾ ಸಂಸ್ಥೆ) ಎಫ್ ಐಆರ್ ನಲ್ಲಿ 21 ಮಂದಿ ಆರೋಪಿಗಳನ್ನು ಹೆಸರಿಸಿರುವುದಾಗಿ ಶನಿವಾರ (ಮಾರ್ಚ್ 26) ತಿಳಿಸಿದೆ.
ಇದನ್ನೂ ಓದಿ:SSLC ಪರೀಕ್ಷೆ: 14,022 ವಿದ್ಯಾರ್ಥಿಗಳು ಸಜ್ಜು : ಈ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ
ಬಿರ್ ಭೂಮ್ ಹತ್ಯಾಕಾಂಡ, ಹಿಂಸಾಚಾರ ಪ್ರಕರಣವನ್ನು ಕೋಲ್ಕತಾ ಹೈಕೋರ್ಟ್ ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ನೀಡಿತ್ತು. 8 ಮಂದಿ ಸಜೀವ ದಹನ ಪ್ರಕರಣವು ರಾಷ್ಟ್ರವ್ಯಾಪಿ ಪರಿಣಾಮ ಬೀರಲಿದ್ದು, ಪಶ್ಚಿಮಬಂಗಾಲ ಸರಕಾರವು ಸಿಬಿಐಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೈಕೋರ್ಟ್ ಸಲಹೆ ನೀಡಿತ್ತು.
ಹಿಂಸಾಚಾರದಲ್ಲಿ ಎಂಟು ಮಂದಿ ಸಜೀವವಾಗಿ ದಹನವಾಗಿರುವ ಘಟನೆ ನಡೆದ ಬಿರ್ ಭೂಮ್ ಜಿಲ್ಲೆಯ ಬೋಗ್ಟುಯಿ ಗ್ರಾಮಕ್ಕೆ ಸಿಬಿಐ ತಂಡ ಭೇಟಿ ನೀಡಿ ತನಿಖೆಯನ್ನು ಆರಂಭಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮಬಂಗಾಳ ಡಿಜಿಪಿ ಮನೋಜ್ ಮಾಲ್ವಿಯಾ ತಿಳಿಸಿದ್ದಾರೆ.
ಟಿಎಂಸಿ ಮುಖಂಡನ ಹತ್ಯೆ ನಂತರ ಮಾರ್ಚ್ 21ರಂದು ಬಿರ್ ಭೂಮ್ ನಲ್ಲಿ ಅಪರಿಚಿತ ವ್ಯಕ್ತಿಗಳು ಹತ್ತು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಂಟು ಮಂದಿ ಸಜೀವವಾಗಿ ದಹನಗೊಂಡಿದ್ದರು.
ನಾವು ಈಗಾಗಲೇ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ನಮಗೆ ನೀಡಿರುವ ಅಂತಿಮ ಗಡುವಿನವರೆಗೆ ಯುದ್ಧೋಪಾದಿಯಲ್ಲಿ ತನಿಖೆ ನಡೆಸಲಿದ್ದೇವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ