![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Delhi CM ಕೇಜ್ರಿವಾಲ್ ರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ: ಆಪ್ ಆಕ್ರೋಶ
ಮದ್ಯದ ಹಗರಣದ ದೂರು ನೀಡಿದ್ದೇ ಕಾಂಗ್ರೆಸ್ ; ನೆನಪಿಲ್ಲವೇ ಎಂದ ಬಿಜೆಪಿ
Team Udayavani, Feb 23, 2024, 7:36 PM IST
![kejriwal-2](https://www.udayavani.com/wp-content/uploads/2024/02/kejriwal-2-6-620x411.jpg)
ನವದೆಹಲಿ: ಮುಂದಿನ ಕೆಲವು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಿಬಿಐ ಯೋಜಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಹೇಳಿದೆ.
ಮುಂಬರುವ ಲೋಕಸಭೆ ಚುನಾವಣೆಗೆ ಎಎಪಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ತಡೆಯಲು,ಭಯದಿಂದ ಬಿಜೆಪಿ ಹೀಗೆ ಮಾಡುತ್ತಿದೆ ಎಂದಿದ್ದು, ಯಾವ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿಲ್ಲ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಹಿರಿಯ ಎಎಪಿ ನಾಯಕ ಸೌರಭ್ ಭಾರದ್ವಾಜ್, ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆ ಮಾತುಕತೆಯ ಅಂತಿಮ ವರದಿಗಳು ಬರಲಾರಂಭಿಸಿದ ಕೂಡಲೇ , ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಕೇಜ್ರಿವಾಲ್ಗೆ ಏಳನೇ ಸಮನ್ಸ್ ಕಳುಹಿಸಿದೆ. ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಲು ಯೋಜಿಸುತ್ತಿದೆ ಎಂದು ನಮಗೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ. ಸಿಬಿಐ ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗೆ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಲಿದೆ. ಇನ್ನೆರಡು ಮೂರು ದಿನಗಳಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಮೈತ್ರಿ ಮಾಡಿಕೊಂಡರೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂಬ ಸಂದೇಶಗಳು ನಮಗೆ ಬರುತ್ತಿವೆ. ನೀವು ಬೇಕಾದರೆ ಕೇಜ್ರಿವಾಲ್ ಅವರನ್ನು ಬಂಧಿಸಬಹುದು, ಆದರೆ ಮೈತ್ರಿ ಮಾಡಿಕೊಳ್ಳುವುದು ಖಚಿತ ಎಂದರು.
ಇನ್ನೊಂದೆಡೆ ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ ಎಂದು ಆಪ್ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಹೇಳಿದ್ದಾರೆ.ಸುನಾಮಿ ಬರಲಿದೆ. ಬಿಜೆಪಿ ರಾಜಕೀಯ ಲೆಕ್ಕಾಚಾರಗಳು ತಪ್ಪುತ್ತವೆ. ಬಂಧನಕ್ಕೆ ನಾವು ಹೆದರುವುದಿಲ್ಲ. ನಾವು ದೇಶಕ್ಕಾಗಿ ಈ ಮೈತ್ರಿಯನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಫೆಬ್ರವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ಗೆ ಹೊಸ ಸಮನ್ಸ್ ಜಾರಿ ಮಾಡಿದೆ.
ಎಎಪಿಯ ಹೇಳಿಕೆಗಳಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತತ್ ಕ್ಷಣ ಪ್ರತಿಕ್ರಿಯೆ ನೀಡಿಲ್ಲ. ಎಎಪಿ ನಾಯಕರು ಗೊಂದಲ ಸೃಷ್ಟಿಸಲು ಮತ್ತು ಕೇಜ್ರಿವಾಲ್ ಬಗ್ಗೆ ಸಹಾನುಭೂತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.
ಲೋಕಸಭೆ ಚುನಾವಣೆಗೆ ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಯಿದ್ದು ಉಭಯ ಪಕ್ಷಗಳ ನಡುವಿನ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ತಿರುಗೇಟು
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ್ ಅವರು, ಕಾಂಗ್ರೆಸ್ನೊಂದಿಗೆ ಎಎಪಿ ಮೈತ್ರಿ ಕುರಿತು ಮಾತುಕತೆ ವಿಫಲವಾಗುತ್ತಿರುವುದು ಕೇಜ್ರಿವಾಲ್ಗೆ ತಿಳಿದಿದೆ ಆದರೆ ಎಎಪಿ ನಾಯಕರು ಗುರುವಾರದಿಂದ ವದಂತಿಗಳನ್ನು ಹರಡುತ್ತಿದ್ದಾರೆ ಮತ್ತು ಮುಖ್ಯಮಂತ್ರಿಯ ಬಗ್ಗೆ ಸಹಾನುಭೂತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.ಕೇಜ್ರಿವಾಲ್ ಅವರು ವಕೀಲರ ಸಹಾಯದಿಂದ ಶಿಕ್ಷೆಯನ್ನು ವಿಳಂಬಗೊಳಿಸಬಹುದು ಆದರೆ ಅಂತಿಮವಾಗಿ, ಮುಂಬರುವ ಚುನಾವಣೆಯಲ್ಲಿ ದೆಹಲಿಯ ಜನರು ಅವರನ್ನು ಕಠಿಣವಾಗಿ ಶಿಕ್ಷಿಸುತ್ತಾರೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರು ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ಗೆ ಮೊದಲ ಲಿಖಿತ ದೂರನ್ನು ಸಲ್ಲಿಸಿದ್ದಾರೆ ಎಂಬುದನ್ನು ಎಎಪಿ ಮತ್ತು ಕೇಜ್ರಿವಾಲ್ ನೆನಪಿಸಿಕೊಳ್ಳಬೇಕು ಎಂದು ಸಚ್ದೇವ್ ಹೇಳಿದರು.
2014ರ ಲೋಕಸಭೆ ಚುನಾವಣೆಯಲ್ಲಿ ಶೇ.51 ಮತ್ತು 2019ರಲ್ಲಿ ಶೇ.59 ಮತಗಳೊಂದಿಗೆ ದೆಹಲಿಯ ಎಲ್ಲ ಏಳು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಜನರು ಬಿಜೆಪಿಗೆ ಶೇ.70ರಷ್ಟು ಮತಗಳನ್ನು ನೀಡಲಿದ್ದಾರೆ ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.