ಸಿಡಿ ಪ್ರಕರಣ: ಐವರು ಟಿವಿ ಸಿಬಂದಿ ವಶಕ್ಕೆ


Team Udayavani, Mar 13, 2021, 7:20 AM IST

ಸಿಡಿ ಪ್ರಕರಣ: ಐವರು ಟಿವಿ ಸಿಬಂದಿ ವಶಕ್ಕೆ

ಬೆಂಗಳೂರು: ಜಾರಕಿಹೊಳಿ ಸಿ.ಡಿ. ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಯುವತಿ ಸಹಿತ 5 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ನಾಲ್ವರು ಟಿ.ವಿ. ಮಾಧ್ಯಮ ಸಿಬಂದಿಯಾಗಿದ್ದು, ಯುವತಿ ರಾಮನಗರದವರು. ಈಕೆ ಸಂತ್ರಸ್ತೆಯ ವಾಸ್ತವ್ಯಕ್ಕೆ ನೆರವು ನೀಡಿದ್ದರು ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಯಶವಂತಪುರದಲ್ಲಿ ಟಿವಿ ಸಿಬಂದಿ, ಈತನ ಸ್ನೇಹಿತೆ ರಾಮನಗರದ ಯುವತಿ, ಚಿಕ್ಕಮಗಳೂರಿನಲ್ಲಿರುವ ಓರ್ವ ಟಿವಿ ಸಿಬಂದಿ, ವಿಜಯಪುರ ಮತ್ತು ಚಾಮರಾಜಪೇಟೆಯ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ. ಪ್ರಕರಣದಲ್ಲಿ ಒಟ್ಟು 9 ಮಂದಿ ಶಾಮೀಲಾಗಿದ್ದಾರೆ, ಇನ್ನುಳಿದ ನಾಲ್ವರ ಸುಳಿವು ಸಿಕ್ಕಿದ್ದು, ಸದ್ಯವೇ ವಶಕ್ಕೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ವಿಜಯನಗರದ ಒಬ್ಬ ಟಿವಿ ಸಿಬಂದಿ ಶುಕ್ರವಾರ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಯಶವಂತಪುರದ ಬಳಿ ಆತನನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಈತನೇ ದಿನೇಶ್‌ ಕಲ್ಲಹಳ್ಳಿಗೆ ಸಿಡಿ ಕೊಟ್ಟಿದ್ದ ಎನ್ನಲಾಗುತ್ತಿದೆ. ಈತ ನೀಡಿದ ಸುಳಿವಿನ ಮೇರೆಗೆ ರಾಮನಗರದ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಈಕೆ ಮತ್ತು ಸಿಡಿಯಲ್ಲಿದ್ದ ಸಂತ್ರಸ್ತೆ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಈಕೆ ಸರಕಾರಿ ನೌಕರೆ ಎಂದು ತಿಳಿದು ಬಂದಿದೆ. ಬಳಿಕ ಚಾಮರಾಜಪೇಟೆಯ ಸೈಬರ್‌ ಪರಿಣತ ಯುವಕನೊಬ್ಬನನ್ನು ಬಲೆಗೆ ಬೀಳಿಸಿದ ಎಸ್‌ಐಟಿ, ಆತನಿಂದ ಹಲವು ಮಾಹಿತಿ ಕಲೆ ಹಾಕಿದೆ.

ಮತ್ತೂಬ್ಬ ಟಿವಿ ಸಿಬಂದಿಯನ್ನು ಚಿಕ್ಕಮಗಳೂರಿನ ಆಲ್ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ಈತ ವೆಬ್‌ ಸೀರಿಸ್‌ ಒಂದನ್ನು ಮಾಡುತ್ತಿದ್ದು, ಪ್ರಕರಣದಲ್ಲಿ ಇತರ ಆರೋಪಿಗಳಿಗೆ ಸಹಕರಿಸಿದ್ದ. ಈ ಸಿಡಿ ತಯಾರಿಸಿದ್ದ ಯುವಕನನ್ನು ವಿಜಯಪುರದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗಿದೆ.

ಎಫ್‌ಐಆರ್‌ ಯಾವಾಗ?
ಪ್ರಕರಣ ಸಂಬಂಧ ಇದುವರೆಗೂ ಪೊಲೀಸರು ಎಫ್‌ಐಆರ್‌ ದಾಖಲಿಸಿಲ್ಲ. ಎಸ್‌ಐಟಿ ಐವರನ್ನು ವಶಕ್ಕೆ ಪಡೆದಿದೆ. ಐವರ ವಿಚಾರಣೆ ಆಧರಿಸಿ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ ಸೈಬರ್‌ ಠಾಣೆಯಲ್ಲಿ ಸುಮೋಟೋ ದಾಖಲಿಸಿಕೊಳ್ಳಬಹುದು. ಇಲ್ಲವಾದಲ್ಲಿ ಸಂತ್ರಸ್ತೆಯನ್ನು ಪತ್ತೆ ಹಚ್ಚಿ ಆಕೆಯಿಂದ ದೂರು ಪಡೆಯಬಹುದು. ಅಥವಾ ಮಾಜಿ ಸಚಿವರ ಮೂಲಕ ದೂರು ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಹೈಕಮಾಂಡ್‌ ಅಂಗಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ದಿಲ್ಲಿಗೆ ತೆರಳಿದ್ದಾರೆ.

ಎಸ್‌ಐಟಿ ತಂಡದಲ್ಲಿ ಯಾರ್ಯಾರು?
ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಸಿಸಿಬಿ ಕಮಿಷನರ್‌ ಸಂದೀಪ್‌ ಪಾಟೀಲ್‌, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್‌.ಅನುಚೇತ್‌, ಸಿಸಿಬಿ ಡಿಸಿಪಿ ಕೆ.ಪಿ. ರವಿಕುಮಾರ್‌, ಎಸಿಪಿ ಧರ್ಮೇಂದ್ರ, ಕಬ್ಬನ್‌ ಪಾರ್ಕ್‌ ಠಾಣೆ ಇನ್‌ಸ್ಪೆಕ್ಟರ್‌ ಬಿ.ಮಾರುತಿ ಮತ್ತು ಡಿ.ಎಂ.ಪ್ರಶಾಂತ್‌ ಬಾಬು ಹಾಗೂ ಸಿಬಂದಿ ತಂಡದಲ್ಲಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.