ಚುನಾವಣಾ ಸುಧಾರಣೆ ಬಾಕಿ: ಸರ್ಕಾರಕ್ಕೆ ಸಿಇಸಿ ಪತ್ರ
Team Udayavani, Jun 8, 2021, 10:59 PM IST
ನವದೆಹಲಿ: ಚುನಾವಣಾ ಕ್ಷೇತ್ರದ ಸುಧಾರಣೆಗಳಿಗೆ ಇರುವ ಕಾನೂನುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ. ಬಹಳ ಹಿಂದೆಯೇ ಈ ಬಗ್ಗೆ ಶಿಫಾರಸು ಸಲ್ಲಿಸಲಾಗಿದ್ದರೂ, ಸರ್ಕಾರದಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಕಳೆದ ತಿಂಗಳೇ ಪತ್ರ ಬರೆಯಲಾಗಿದೆ ಎಂದು ಸುಶೀಲ್ಚಂದ್ರ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡುವವರಿಗೆ 2 ವರ್ಷ ಜೈಲು ಶಿಕ್ಷೆ ನೀಡಬೇಕು, ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ 6 ವರ್ಷ ನಿಷೇಧ ಹೇರಬೇಕು ಎಂಬುದು ಸೇರಿ ಹಲವು ಸುಧಾರಣಾ ಕ್ರಮಗಳನ್ನು ಆಯೋಗ ಶಿಫಾರಸು ಮಾಡಿತ್ತು. ಜನತಾ ಪ್ರಾನಿಧ್ಯ ಕಾಯ್ದೆ ಪ್ರಕಾರ “ಪಾವತಿ ಸುದ್ದಿ’ (ಪೈಡ್ ನ್ಯೂಸ್)ಯನ್ನು ಚುನಾವಣಾ ನಿಯಮ ಉಲ್ಲಂಘನೆ ಎಂದು ಪರಿಗಣಿಸಬೇಕು, ಪ್ರಚಾರ ಅಂತ್ಯಗೊಂಡ ದಿನದಿಂದ ಮತದಾನ ನಡೆಯುವ ದಿನದವರೆಗೆ ರಾಜಕೀಯ ಪಕ್ಷಗಳು ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದನ್ನು ನಿಷೇಧಿಸಬೇಕು. ಆ ಅವಧಿಯನ್ನು “ನಿಶ್ಶಬ್ದ ಅವಧಿ’ (ಸೈಲೆಂಟ್ ಪಿರಿಯೆಡ್) ಎಂದು ಪರಿಗಣಿಸುವಂತೆಯೂ ಸಲಹೆ ಮಾಡಿದೆ. ಈ ಉದ್ದೇಶಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕಾಗುತ್ತದೆ.
ಇದನ್ನೂ ಓದಿ :ಜಗತ್ತಿನಲ್ಲಿ ಇಂಗಾಲದ ಪ್ರಮಾಣ ಶೇ.50ಕ್ಕಿಂತ ಹೆಚ್ಚಳ! ಮಾಹಿತಿ ಬಹಿರಂಗಪಡಿಸಿದ ಎನ್ಒಎಎ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ