Manipur ಸಂಘರ್ಷ ಶಮನಕ್ಕೆ ಕೇಂದ್ರ ಹಿಂಬಾಗಿಲ ಮಾತುಕತೆ
Team Udayavani, Jul 5, 2023, 7:44 AM IST
ಇಂಫಾಲ್: ಸಂಘರ್ಷ ಪೀಡಿತ ಮಣಿಪುರವನ್ನು ಶಾಂತಗೊಳಿಸುವ ನಿಟ್ಟಿನಲ್ಲಿ ರೂಪಿಸಿದ್ದ ಗವರ್ನರ್ ನೇತೃತ್ವದ ಸಮಿತಿಯನ್ನು ಸ್ಥಳೀಯ ಜನಾಂಗೀಯ ಗುಂಪುಗಳು ವಿರೋಧಿಸಿದ ಬೆನ್ನಲ್ಲೇ, ಮಣಿಪುರ ಸಮಸ್ಯೆ ಶಮನಗೊಳಿಸಲು ಖುದ್ದು ಕೇಂದ್ರ ಸರ್ಕಾರವೇ ಮುಂದಾಗಿದ್ದು, ಕುಕಿ ಹಾಗೂ ಮೈತೇಯಿ ಜನಾಂಗದ ಜತೆಗೆ ಹಿಂಬಾಗಿಲ ಮಾತುಕತೆ ನಡೆಸಿದೆ.
ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ಸರ್ಕಾರ ನಡೆಸಿರುವ ಈ ಹಿಂಬಾಗಿಲ ಮಾತುಕತೆ ಅಲ್ಪ ಪ್ರಮಾಣದ ಯಶಸ್ಸಿಗೆ ಕಾರಣವಾಗಿದೆ. ಈ ಮಾತುಕತೆಯ ಬಳಿಕವೇ ರಾಷ್ಟ್ರೀಯ ಹೆದ್ದಾರಿ 2ನ್ನು ಅಡ್ಡಗಟ್ಟಿದ್ದ ಕುಕಿ ಜನರು ಅಲ್ಲಿಂದ ಹೊರ ನಡೆದಿದ್ದಾರೆ. ಈಗ ಮೈತೇಯಿ ಸಮುದಾಯದ ಜತೆಗೆ ಮುಖಾಮುಖೀ ಮಾತುಕತೆಯನ್ನು ನಿರೀಕ್ಷಿಸಲಾಗಿದೆ. ಶೀಘ್ರವೇ ಮಣಿಪುರದ ಆಂತರಿಕ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಸ್ತ್ರಾಸ್ತ್ರ ಲೂಟಿಯೇ ಸವಾಲು
ರಾಜ್ಯದಲ್ಲಿ ಗಲಭೆ ಶುರುವಾದಗಿನಿಂದ ಭದ್ರತಾ ಪಡೆಗಳ ಶಸ್ತ್ರಾಗಾರಗಳಿಂದ ಶಸ್ತ್ರಾಸ್ತ್ರಗಳನ್ನು ಗಲಭೆ ಗುಂಪುಗಳು ದೋಚಿವೆ. ಮೇ.3ರಿಂದ ಈ ವರೆಗೆ 5,000 ಶಸ್ತ್ರಾಸ್ತ್ರಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ ತೌಬಾಲ್ ಜಿಲ್ಲೆಯಲ್ಲಿ ಮಂಗಳವಾರವೂ ಶಸ್ತ್ರಾಸ್ತ್ರ ಲೂಟಿಗೆ ಗುಂಪುಗಳು ಮುಂದಾಗಿದ್ದು, ಅದನ್ನು ತಪ್ಪಿಸುವ ಭದ್ರತಾ ಪಡೆಗಳ ಪ್ರಯತ್ನದಲ್ಲಿ ದುಷ್ಕರ್ಮಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ