ಕೇಂದ್ರ ಬಜೆಟ್ : ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ಲೇಷಿಸಿದ್ದು ಹೀಗೆ
ಮೋದಿ ಕಾಲ ಸುಭೀಕ್ಷವಾಗಿದೆ ಅನ್ನುವುದು ಸುಳ್ಳು....
Team Udayavani, Feb 1, 2022, 5:11 PM IST
ಮೈಸೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್ ಕುರಿತಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಜನರ ನಿರೀಕ್ಷೆ ಈಡೇರಿಲ್ಲ ಎಂದಿದ್ದಾರೆ.
ಹೆಚ್.ಡಿ.ಕೋಟೆ ತಾಲೂಕಿನ ಜಂಗಲ್ ಲಾಡ್ಜ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೊನ್ನೆ ನಾನು ಇಲ್ಲಿ ವಿಶ್ರಾಂತಿಗಾಗಿ ಬಂದಿದ್ದ ಕಾರಣ ಇಲ್ಲಿಯೇ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ ಎಂದರು.
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2022-23 ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ನಾನು ಬಹಳ ನಿರೀಕ್ಷೆ ಇಟ್ಟಿರಲಿಲ್ಲ,ಆದರೆ ರೈತರು, ಯುವಕರು, ಮಹಿಳೆಯರು ತುಂಬಾ ನಿರೀಕ್ಷೆ ಇಟ್ಟಿದ್ದರು.ಆ ನಿರೀಕ್ಷೆ ಈಡೇರಿಲ್ಲ ಎಂದರು.
ಆರೋಗ್ಯ, ಶಿಕ್ಷಣ, ಕೃಷಿ ಈ ಕ್ಷೇತ್ರದ ಉತ್ತೇಜನ ನೀಡುವ ಯೋಜನೆ ಘೋಷಣೆಯಾಗುತ್ತವೆ ಎಂಬ ನಿರೀಕ್ಷೆ ಇತ್ತು. ಕಳೆದ ವರ್ಷ 34 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಸೈಜ್ ಮಂಡಿಸಿದ್ದರು.ಈ ವರ್ಷ 39.45 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 4ಲಕ್ಷದ 61 ಸಾವಿರ ಕೋಟಿ ರೂಪಾಯಿ ಹೆಚ್ಚಳದ ಬಜೆಟ್ ಘೋಷಣೆ ಮಾಡಿದ್ದಾರೆ.ವರ್ಷಕ್ಕೆ 11ಲಕ್ಷದ 87 ಸಾವಿರದ 180 ಕೋಟಿ ರೂಪಾಯಿಗಳನ್ನ ಸಾಲ ಮಾಡುತ್ತಿದ್ದಾರೆ. ಅಸಲು ಮತ್ತು ಬಡ್ಡಿ ಬಜೆಟ್ ಭಾಗ, ಸಾಲಕ್ಕೆ ಬಡ್ಡಿಗೆ ಹೋಗುತ್ತದೆ.ವಾರ್ಷಿಕವಾಗಿ 9 ಲಕ್ಷದ 40 ಸಾವಿರದ 651 ಕೋಟಿ ಬಡ್ಡಿ ಕಟ್ಟಬೇಕಾಗುತ್ತದೆ ಎಂದರು.
ನರೇಗಾ ಇಲ್ಲದೆ ಇದ್ದಿದ್ದರೆ ಹಳ್ಳಿಗಳಿಗೆ ಬಹಳ ಕಷ್ಟ ಆಗುತ್ತಿತ್ತು.ಆ ಯೋಜನೆ ಡಾ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜಾರಿ ಮಾಡಿದ್ದರು.
ಈ ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 38,169 ಸಾವಿರ ಕೋಟಿ ಕಡಿಮೆ ಮಾಡಿದ್ದಾರೆ ಎಂದರು.
ಗ್ರಾಮೀಣ ಜನರಿಗೆ ಉದ್ಯೋಗ ಕೊಡಬೇಕಾದರೆ ನರೇಗಾ ಅನುದಾನ ಹೆಚ್ಚು ಮಾಡಬೇಕಿತ್ತು.ಕಳೆದ ವರ್ಷಕ್ಕೂ ಈ ವರ್ಷಕ್ಕೂ ಹೋಲಿಕೆ ಮಾಡಿದರೆ ಕೇವಲ 80 ಕೋಟಿ ಅಷ್ಟೇ ಹೆಚ್ಚು ಮಾಡಿದ್ದಾರೆ. ಅಹಾರ ಮತ್ತು ನಾಗರೀಕ ಸರಬರಾಜು ಕ್ಷೇತ್ರ ಸಬ್ಸಿಡಿ 79638 ಕೋಟಿ ಕಡಿಮೆಯಾಗಿದೆ.ಫುಡ್ ಸಬ್ಸಿಡಿ ಕಡಿಮೆ ಮಾಡಿದ್ದಾರೆ.ಇದು ಉಚಿತ ಅಕ್ಕಿ ಮೇಲೆ ಪರಿಣಾಮ ಬೀರಲಿದೆ ಎಂದರು.
ಜಿಡಿಪಿ ಮಹನೋನ್ ಸಿಂಗ್ ಕಾಲದಲ್ಲಿ 46 % ಇದ್ದರೆ ಈವಾಗ 62 % ಆಗಿದೆ.ನರೇಂದ್ರ ಮೋದಿ ಕಾಲ ಸುಭೀಕ್ಷವಾಗಿದೆ ಅನ್ನುವುದು ಸುಳ್ಳು ಎಂದರು.
ಉನ್ನತ ಶಿಕ್ಷಣಕ್ಕೆ ನ್ಯಾಷನಲ್ ಎಜುಕೇಶನಲ್ ಪಾಲಿಸಿ ಬೇರೆ ತಂದಿದ್ದಾರೆ.4779 ಕೋಟಿ ರೂಪಾಯಿ ಗಳನ್ನ ಉನ್ನತ ಶಿಕ್ಷಣಕ್ಕೆ ಹೆಚ್ಚು ಮಾಡಿದ್ದಾರೆ. ಒಟ್ಟಾರೆ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಕಡಿಮೆ ಮಾಡಿದ್ದಾರೆ ಎಂದರು.
35 ಸಾವಿರ ಕೋಟಿ ರೂಪಾಯಿ ಗೊಬ್ಬರದ ಸಬ್ಸಿಡಿ ಕಡಿಮೆಯಾಗಿದೆ. ಮುಂದೆ ಗೊಬ್ಬರದ ಬೆಲೆ ಏರಿಕೆಯಾಗಲಿದೆ ಎಂದು ವಿವರವಾಗಿ ಬಜೆಟ್ ಕುರಿತಾಗಿ ಅಸಮಾಧಾನ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!