ರೈತರ ಅಭಿವೃದ್ಧಿಗೆ ಕೇಂದ್ರ ಬದ್ಧ :ಉತ್ತರಾಖಂಡ ರೈತನ ಪತ್ರಕ್ಕೆ ಪ್ರಧಾನಿ ಮೋದಿ ಪ್ರತ್ಯುತ್ತರ
Team Udayavani, Mar 18, 2021, 7:48 PM IST
ನವದೆಹಲಿ: “ರೈತ ಬೆಳೆದ ಧಾನ್ಯಗಳು, ಹೊಲದಿಂದ ಮಾರುಕಟ್ಟೆಯವರೆಗೆ ಸರಾಗವಾಗಿ ತಲುಪುವಲ್ಲಿ ಅಡ್ಡವಾಗಿರುವ ಎಲ್ಲಾ ಅಡಚಣೆಗಳನ್ನು ನಿವಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಉತ್ತರಾಖಂಡದ ನೈನಿತಾಲ್ ನಿವಾಸಿ ಖೀಮಾನಂದ್ ಪಾಂಡೆ ಎಂಬ ರೈತ, ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ (ಪಿಎಂಎಫ್ಬಿವೈ) ಐದು ವರ್ಷಗಳನ್ನು ಪೂರೈಸಿದ್ದಕ್ಕೆ ಪ್ರಧಾನಿಯವರನ್ನು ಅಭಿನಂದಿಸಿ ಪತ್ರವೊಂದನ್ನು ಬರೆದಿದ್ದರು. ಅದಕ್ಕೆ ಉತ್ತರಿಸಿರುವ ಪ್ರಧಾನಿ “ಪಿಎಂಎಫ್ಬಿವೈ ಯೋಜನೆಯು ಶ್ರಮಜೀವಿಗಳಾದ ರೈತರಿಗೆ ಆರ್ಥಿಕ ಭದ್ರತೆಯನ್ನು ಕೊಡುತ್ತದೆ. ಜೊತೆಗೆ, ಹವಾಮಾನ, ನೈಸರ್ಗಿಕ ವಿಕೋಪಗಳಿಂದ ಆಗುವ ನಷ್ಟಗಳ ಹೊರೆಯನ್ನು ಕಡಿಮೆ ಮಾಡುತ್ತದೆ. ಕೋಟ್ಯಂತರ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ’ ಎಂದಿದ್ದಾರೆ.
ನಮ್ಮ ಸರ್ಕಾರಕ್ಕಿರುವ ರೈತರ ಪರ ಕಾಳಜಿಯನ್ನು ಪಿಎಂಎಫ್ಬಿವೈ ಯೋಜನೆ ತೋರಿಸಿಕೊಟ್ಟಿದೆ. ಇಳುವರಿ ಖಾತ್ರಿ ಹಾಗೂ ಅಭಿವೃದ್ಧಿ ಖಾತ್ರಿಯನ್ನು ಈ ಯೋಜನೆ ಒಳಗೊಂಡಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಇದನ್ನೂ ಓದಿ :ಕೆಪಿಎಸ್ಸಿ ಪರೀಕ್ಷಾ ವಿಧಾನಗಳಲ್ಲಿ ಬದಲಾವಣೆ ತರಲು ಚಿಂತನೆ : ಸಚಿವ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ