ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳ ಹೆಸರು ಬದಲಿಸಲು ಕೇಂದ್ರ ಒಪ್ಪಿಗೆ…ಹೊಸ ಹೆಸರೇನು?
Team Udayavani, Feb 25, 2023, 3:29 PM IST
ಮುಂಬೈ: ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳ ಹೆಸರನ್ನು ಮರುನಾಮಕರಣ ಮಾಡಬೇಕೆಂದು ಕೇಂದ್ರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಮತ್ತು ವ್ಯವಹಾರ ಸಚಿವಾಲಯ ಅನುಮೋದಿಸಿದೆ. ಅಲ್ಲದೇ ಎರಡು ನಗರಗಳ ಹೆಸರು ಬದಲಾವಣೆಗೆ ತಮ್ಮ ಆಕ್ಷೇಪ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಹೀಗಾಗಿ ಇನ್ನು ಔರಂಗಾಬಾದ್ ನಗರ “ಛತ್ರಪತಿ ಸಂಬಾಜಿ ನಗರ” ಎಂದೂ, ಒಸ್ಮಾನಾಬಾದ್ ನಗರವನ್ನು “ಧಾರಾಶಿವ್ ನಗರ” ಎಂದೂ ಮರುನಾಮಕರಣ ಮಾಡಲಾಗಿದೆ.
ನಗರಗಳ ಹೆಸರನ್ನು ಬದಲಾವಣೆಗೆ ಕೇಂದ್ರ ಸರ್ಕಾರ ಸಮ್ಮತಿಸಿ ಬೆನಲ್ಲೇ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿದ್ದಕ್ಕೆ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಮುಖ್ಯಮಂತರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ನಾಯಕತ್ವ ಈಗ ಜನರಿಗೆ ತಲುಪುತ್ತಿದೆ ಎಂದು ಬರೆದುಕೊಂಡಿದ್ದಾರೆ.
➡️ औरंगाबादचे ‘छत्रपती संभाजीनगर’,
➡️ उस्मानाबादचे ‘धाराशिव’ !
राज्य सरकारच्या निर्णयाला केंद्र सरकारची मंजुरी !
मा. पंतप्रधान नरेंद्र मोदीजी आणि केंद्रीय मंत्री मा. अमितभाई शाह यांचे कोटी-कोटी आभार!
मुख्यमंत्री @mieknathshinde जी यांच्या नेतृत्त्वातील सरकारने ‘करुन दाखविले’…! pic.twitter.com/IfXbdFec7r— Devendra Fadnavis (@Dev_Fadnavis) February 24, 2023