ರಾಜ್ಯಾದ್ಯಂತ ಇಂದಿನಿಂದ CET ಪರೀಕ್ಷೆ
ಪರೀಕ್ಷೆ ಬರೆಯಲಿದ್ದಾರೆ 2.61ಲಕ್ಷ ವಿದ್ಯಾರ್ಥಿಗಳು-592 ಕೇಂದ್ರಗಳಲ್ಲಿ ಆಯೋಜನೆ
Team Udayavani, May 20, 2023, 6:56 AM IST
ಬೆಂಗಳೂರು: ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ಮೇ 20 ರಿಂದ ಮೇ 22 ರವರೆಗೆ ನಡೆಯಲಿದ್ದು ರಾಜ್ಯಾದ್ಯಂತ 2.61ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ನ್ಯಾಚುರೋಪತಿ ಮತ್ತು ಯೋಗ, ಕೃಷಿ ವಿಜ್ಞಾನ ಮತ್ತು ಬಿ. ಫಾರ್ಮ, ಪಶು ವೈದ್ಯಕೀಯ ಮತ್ತು ಬಿಎಸ್ಸಿ ನರ್ಸಿಂಗ್ ಪ್ರವೇಶಕ್ಕೆ ಸಿಇಟಿ ನಡೆಯಲಿದೆ. ಈ ಪೈಕಿ ಬಿಎಸ್ಸಿ ನರ್ಸಿಂಗ್ಗೆ ಮೊದಲ ಬಾರಿಗೆ ಸಿಇಟಿ ನಡೆಯುತ್ತಿದೆ.
ರಾಜ್ಯದ 592 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪೈಕಿ 121 ಕೇಂದ್ರಗಳು ಬೆಂಗಳೂರಿನಲ್ಲಿವೆ. 1.40 ಲಕ್ಷ ವಿದ್ಯಾರ್ಥಿನಿಯರು ಮತ್ತು 1.21ಲಕ್ಷ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿನ ಈ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸುಮಾರು 24 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಕ್ಕಳು ವಾಚ್, ಲೋಹದ ಆಭರಣ, ಫುಲ್ ಸ್ಲಿವ್ ಶರ್ಟ್ ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಕಿವಿ, ತಲೆ ಮುಚ್ಚುವಂತಹ ವಸ್ತ್ರಗಳನ್ನು ಧರಿಸುವ ಹಾಗಿಲ್ಲ. ಹಾಗೆಯೇ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್ ಫೋನ್, ಬ್ಲೂಟೂಥ್, ಕ್ಯಾಲ್ಕೂಲೇಟರ್, ಸ್ಲೆ„ಡ್ ರೂಲ್ಸ್, ವೈಟ್ ಫೂÉಯೈಡ್, ವೈರ್ಲೆಸ್ ಸೆಟ್, ಪೇಪರ್ ಚೀಟಿ, ಪುಸ್ತಕವನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ಮಾತ್ರ ಬಳಸಬೇಕು. ಮೂರಕ್ಕಿಂತ ಹೆಚ್ಚು ಪೆನ್ನು ಮತ್ತು ಪೆನ್ಸಿಲ್ ತೆಗೆದುಕೊಂಡು ಹೋಗುವ ಹಾಗಿಲ್ಲ. ಎಂದು ಸೂಚಿಸಲಾಗಿದೆ.
ಕೋವಿಡ್ – 19 ರ ಲಕ್ಷಣಗಳಿದ್ದರೆ ಸರ್ಜಿಕಲ್ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ. ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಮಾನ್ಯತೆ ಇರುವ ಭಾವಚಿತ್ರವುಳ್ಳ ಗುರುತಿನ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಸೂಚಿಸಲಾಗಿದೆ.
ವೇಳಾಪಟ್ಟಿ
ಮೇ 20ರಂದು ಬೆಳಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಮೇ. 21 ರಂದು ಬೆಳಗ್ಗೆ 10.30 ರಿಂದ 11.50ರವರೆಗೆ ಭೌತ ಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 22 ರಂದು ಹೊರನಾಡ ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ