ಕಂಬಳ ಕರೆಗೆ ಇಳಿದ ಬಾಲಕಿ : ಆರನೇ ತರಗತಿ ವಿದ್ಯಾರ್ಥಿನಿ ಚೈತ್ರಾಳ ಚಿತ್ತ ಕಂಬಳದತ್ತ!


Team Udayavani, Mar 4, 2021, 6:50 AM IST

ಕಂಬಳ ಕರೆಗೆ ಇಳಿದ ಬಾಲಕಿ : ಆರನೇ ತರಗತಿ ವಿದ್ಯಾರ್ಥಿನಿ ಚೈತ್ರಾಳ ಚಿತ್ತ ಕಂಬಳದತ್ತ!

ಕಾರ್ಕಳ : ತುಳುನಾಡಿನಲ್ಲಿ ಈಗ ಕಂಬಳದ ಅಬ್ಬರ. ಕೃಷಿ ಪರಂಪರೆಯ ಕಂಬಳದಲ್ಲಿ ಹೊಸ ದಾಖಲೆ, ಪ್ರಯೋಗ ನಡೆದೇ ಇದೆ. ಇತ್ತೀಚೆಗಷ್ಟೇ ಬಜಗೋಳಿಯ ಬಾಲಕ ಕೋಣಗಳ ಜತೆ ಓಡಿ ಸಂಚಲನ ಮೂಡಿಸಿದ್ದು, ಈಗ ಬಾಲಕಿಯೋರ್ವಳು ಕಂಬಳ ಕರೆಗೆ ಇಳಿಯುವ ಮೂಲಕ ಕಂಬಳದಲ್ಲಿ ಹೊಸ ಭರವಸೆ ಸೃಷ್ಟಿಸುವ ಆಶಾವಾದ ಮೂಡಿಸಿದ್ದಾಳೆ.

ಕೆಲ ದಿನಗಳ ಹಿಂದೆ ಮಿಯ್ನಾರುವಿನ ಲವಕುಶ ಜೋಡುಕರೆ ಕಂಬಳದಲ್ಲಿ ಪರಮೇಶ್ವರ ಭಟ್‌ ಅವರ ಪುತ್ರಿ ಚೈತ್ರಾ ಮೊತ್ತಮೊದಲ ಬಾರಿಗೆ ಕಂಬಳ ಕರೆಗೆ ಇಳಿದಿದ್ದಾಳೆ. ಈ ಮೂಲಕ ಪುರುಷ ಪ್ರಧಾನವಾಗಿರುವ ಕಂಬಳ ಕ್ರೀಡೆಯಲ್ಲಿ ಬಾಲಕಿಯ ಪ್ರವೇಶವಾಗಿದೆ. ಬೋಳಂಬಳ್ಳಿಯ ಕುವರಿ ಕುಂದಾಪುರ ಬೋಳಂಬಳ್ಳಿ ಗ್ರಾಮದ ಪರಮೇಶ್ವರ ಭಟ್‌ -ರಮ್ಯಾ ದಂಪತಿಯ
ಇಬ್ಬರು ಮಕ್ಕಳಲ್ಲಿ ಚೈತ್ರಾ ಹಿರಿಯವಳು.

ವಯಸ್ಸು 11. ಕಾಲ್ತೊಡು ಸರಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಈಕೆ ಮಿಯ್ನಾರು ಕಂಬಳದಲ್ಲಿ ಕೋಣದ ಯಜಮಾನಿಕೆಯ ನೇತೃತ್ವ ವಹಿಸಿ, ಕಂಬಳ ಕರೆಗೆ ಇಳಿದಿದ್ದಳು. ಈಕೆಯ ಸಹೋದರ ರಾಮ್‌ ಭಟ್‌ ಕೂಡ ಕಂಬಳಪ್ರೇಮಿ.
ಬಾಲ್ಯದಿಂದಲೇ ಆಸಕ್ತಿ ಚೈತ್ರಾಗೆ ಕಂಬಳ ಕೋಣಗಳೆಂದರೆ ತುಂಬಾ ಪ್ರೀತಿ. ಚಿಕ್ಕ ವಯಸ್ಸಿನಲ್ಲೇ ಕಂಬಳ ಕೋಣಗಳಿಗೆ ಸ್ನಾನಮಾಡಿಸುತ್ತ, ಹುರುಳಿ ಬೇಯಿಸಿ ತಿನ್ನಿಸುತ್ತ, ತಂದೆ- ತಾಯಿಗೆ ಸಹಾಯ ಮಾಡುತ್ತ ಬೆಳೆದವಳು. ಕೋಣಗಳ ಮೇಲಿನ ಈಕೆಯ ಪ್ರೀತಿ ಕಂಬಳದ ಕರೆಗೆ ಇಳಿಯುವ ಮೂಲಕ ಮುಂದುವರಿದಿದೆ. ಕೃಷಿಕ ಪರಮೇಶ್ವರ್‌ ಭಟ್‌ 25 ವರ್ಷಗಳಿಂದ ಕೋಣಗಳನ್ನು ಸಾಕುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ದ.ಕ., ಉಡುಪಿ ಜಿಲ್ಲೆಯ ಕಂಬಳಗಳಲ್ಲಿ ಭಾಗವಹಿಸುತ್ತಿದ್ದಾರೆ. ಆಗೆಲ್ಲ ಚೈತ್ರಾಳಿಗೆ ಅವಕಾಶ ಸಿಕ್ಕಿರಲಿಲ್ಲ. ಮಿಯ್ನಾರುವಿನಲ್ಲಿ ನಡೆದ ಕಂಬಳದಲ್ಲಿ ಈಕೆಗೆ ಅವಕಾಶ ದೊರೆತಿದೆ.

ಶ್ರೀನಿವಾಸ ಅವರೇ ಮಾಡೆಲ್‌!
ಮನೆಯಲ್ಲಿ ಕಂಬಳದ 110 ಮೀಟರ್‌ ಉದ್ದದ ಕರೆಯಿದ್ದು ಪ್ರತಿ ವಾರ ಕಂಬಳ ಕೋಣಗಳನ್ನು ಓಡಿಸುತ್ತಾ ಚೈತ್ರಾ ಅಭ್ಯಾಸ ನಡೆಸುತ್ತಿದ್ದಾಳೆ . ತಾನು ಕೂಡ ಕಂಬಳ ಓಟಗಾರ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರಂತೆ ಕಂಬಳ ಓಟದಲ್ಲಿ ಮಿಂಚಬೇಕು ಎನ್ನುವ ಆಸೆ ತನ್ನದು ಎಂದು ಆಕೆ ಹೇಳುತ್ತಾಳೆ.

ತರಬೇತಿಗೆ ಬದ್ಧ
ಚೈತ್ರಾ ಕರೆಗೆ ಇಳಿದಿರುವುದು ಕಂಬಳ ಇತಿಹಾಸದಲ್ಲೇ ಹೊಸದೊಂದು ಅಧ್ಯಾಯ. ಇದು ಮಹಿಳೆಯರಿಗೂ ಪ್ರಾತಿನಿಧ್ಯ ನೀಡಲು ಅವಕಾಶ ಸಿಕ್ಕಂತಾಗಿದೆ. ಈ ಕ್ರೀಡೆಯಲ್ಲಿ ಮಹಿಳಾ ಓಟಗಾರರಿಗೂ ಪ್ರಾಶಸ್ತ್ಯ ನೀಡಲು ಕಂಬಳ ಅಕಾಡೆಮಿಯ ಮೂಲಕ ಸೂಕ್ತ ತರಬೇತಿ ನೀಡಲು ನಾವು ಬದ್ಧರಾಗಿದ್ದೇವೆ.
– ಗುಣಪಾಲ ಕಡಂಬ , ಕಂಬಳ ಅಕಾಡೆಮಿ ಸಂಚಾಲಕರು

ಪ್ರೋತ್ಸಾಹದ ನಿರೀಕ್ಷೆ
ಕಂಬಳದ ಸಮಯದಲ್ಲಿ ಕೋಣಗಳ ಶೃಂಗಾರದಲ್ಲಿ ಆಕೆಯೇ ಮುಖ್ಯ ಪಾತ್ರವಹಿಸುತ್ತಾಳೆ. ಮನೆಯ ಕಂಬಳ ಕರೆಯಲ್ಲಿ ಆಕೆಯೇ ಕೋಣಗಳನ್ನು ತೆಗೆದುಕೊಂಡು ಓಡಿಸುತ್ತಾಳೆ. ಪ್ರೋತ್ಸಾಹ ಸಿಕ್ಕಿದರೆ ಜೂನಿಯರ್‌ ವಿಭಾಗದಲ್ಲಿ ಆಕೆಯನ್ನು ಭಾಗವಹಿಸುವಂತೆ
ಮಾಡಬೇಕೆನ್ನುವುದು ನನ್ನ ಆಶಯ.
– ಪರಮೇಶ್ವರ್‌ ಭಟ್‌ ಬೋಳಂಬಳ್ಳಿ, ತಂದೆ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.