ಚಾಮರಾಜನಗರದಲ್ಲಿ ಎರಡನೇ ಕೋವಿಡ್ ಪ್ರಕರಣ : ತಮಿಳುನಾಡಿಗೆ ಹೋಗಿಬಂದ ವ್ಯಕ್ತಿಯಲ್ಲಿ ಸೋಂಕು ದೃಢ


Team Udayavani, Jun 20, 2020, 1:23 PM IST

ಚಾಮರಾಜನಗರದಲ್ಲಿ ಎರಡನೇ ಕೋವಿಡ್ ಪ್ರಕರಣ : ತಮಿಳುನಾಡಿಗೆ ಹೋಗಿಬಂದ ವ್ಯಕ್ತಿಯಲ್ಲಿ ಸೋಂಕು ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಎರಡನೇ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಗುಂಡ್ಲುಪೇಟೆ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ 39 ವರ್ಷದ ಸರಕು ಸಾಗಾಣಿಕೆ ವಾಹನ ಚಾಲಕನಿಗೆ ಕೋವಿಡ್ ದೃಢಪಟ್ಟಿದೆ.

ಜಿಲ್ಲಾಧಿಕಾರಿ ಡಾ. ಎಂ. ರವಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈರುಳ್ಳಿ ಸಾಗಾಣಿಕೆ ಮಾಡುವ ಈ ಚಾಲಕ ತಮಿಳುನಾಡಿಗೆ ಈ ವಾರದಲ್ಲಿ ಮೂರು ಬಾರಿ ಹೋಗಿ ಬಂದಿದ್ದ. ಜೂ. 18ರಂದು ಕೆಮ್ಮಿನ ಕಾರಣ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದು, ಅಲ್ಲಿ ಈತನ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂ. 19ರಂದು ಪ್ರಕರಣ ದೃಢಪಟ್ಟಿದೆ ಎಂದು ತಿಳಿಸಿದರು.

ಈಗ ಸೋಂಕಿತನನ್ನು ಚಾಮರಾಜನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನ ಪತ್ನಿ, ಮೂವರು ಮಕ್ಕಳು ಮತ್ತಿತರರ 10 ಮಂದಿಯನ್ನು ಪ್ರಾಥಮಿಕ ಸೋಂಕಿತರು ಎಂದು ಗುರುತಿಸಲಾಗಿದೆ. ಇವರು ವಾಸವಿದ್ದ ಸುತ್ತ ಮುತ್ತಲ ಪ್ರದೇಶವನ್ನು ಕಂಟೈನ್‌ಮೆಂಟ್ ವಲಯ ಎಂದು ಪರಿಗಣಿಸಿ, ಪ್ರಾಥಮಿಕ ಸಂಪರ್ಕಿತರನ್ನು ಅವರವರ ಮನೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಿರುವುದರಿಂದ ಆ ವಲಯದ ಜನರು ಮನೆಯಿಂದ ಹೊರಗೆ ಬರುವಂತಿಲ್ಲ ಎಂದು ಹೇಳಿದರು.

ಸೋಂಕಿತ ಗುಂಡ್ಲುಪೇಟೆಯಲ್ಲಿ ಓಡಾಡಿರಬಹುದಾದ ಸ್ಥಳಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ನಿರ್ಬಂಧಿತ ವಲಯದಲ್ಲಿ ಇನ್ಸಿಡೆಂಟ್ ಕಮಾಂಡೆಂಟ್ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಜಿಲ್ಲೆಯ ಮೊದಲನೇ ಕಂಟೈನ್‌ಮೆಂಟ್ ವಲಯ.

ಕಂಟೈನ್‌ಮೆಟ್ ವಲಯದಲ್ಲಿರುವ ಜನರಿಗೆ ಎಲ್ಲ ರೀತಿಯ ಮೂಲಸೌಕರ್ಯಗಳು, ದಿನಬಳಕೆಯ ವಸ್ತುಗಳು, ಔಷಧಿಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುತ್ತೇವೆ. ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ಪ್ರದೇಶದೊಳಕ್ಕೆ ಸಾರ್ವಜನಿಕರು ಹೋಗುವಂತಿಲ್ಲ. ಅವರು ಈ ವಲಯದಿಂದ ಈಚೆ ಬರುವಂತಿಲ್ಲ. ಕಂಟೈನ್‌ಮೆಂಟ್ ವಲಯದಲ್ಲಿರುವವರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುವುದು. ಮಕ್ಕಳು, 60 ವರ್ಷ ಮೇಲ್ಪಟ್ಟವರಿದ್ದು ಅವರಿಗೆ ಗಂಭೀರ ಕಾಯಿಲೆ ಇರುವವರನ್ನು ಪರಿಶೀಲನೆ ನಡೆಸಲಾಗುವುದು ಎಂದು ಡೀಸಿ ವಿವರಿಸಿದರು.

ಮುಂಬೈ ಸೋಂಕಿತ ಗುಣಮುಖ: ಮುಂಬೈನಿಂದ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿ ಕೋವಿಡ್‌ನಿಂದ ಸಂಪೂರ್ಣ ಗುಣಮುಖನಾಗಿ ಜಕ್ಕಳ್ಳಿಯ ತಮ್ಮ ಬಂಧುವಿನ ಮನೆಗೆ ಹೋಗಿದ್ದಾರೆ. ಆತನ ತಾಯಿ ಮತ್ತು ಸೋದರ ಸಹ ಅಲ್ಲೇ ಇದ್ದಾರೆ. 14 ದಿನಗಳ ಕ್ವಾರಂಟೈನ್ ಮುಗಿಸಿದ ನಂತರ ಮುಂಬೈಗೆ ಕಳುಹಿಸಿಕೊಡಲಾಗುವುದು ಎಂದು ಡಾ. ರವಿ ತಿಳಿಸಿದರು.

ಎಸ್ಪಿ ಆನಂದಕುಮಾರ್ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿ ನಮ್ಮ ಜಿಲ್ಲೆಗೆ ಮುಂಬೈಯಿಂದ ಮಾಹಿತಿ ನೀಡದೇ ಬಂದಿದ್ದು ಅಪರಾಧವಾಗಿದೆ. ಇವರನ್ನು ಸೋದರಮಾವ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಕರೆದುಕೊಂಡು ಬಂದಿದ್ದಾರೆ. ಅನುಮತಿ ಪಡೆಯದೇ ಅನ್ಯ ರಾಜ್ಯದ ವ್ಯಕ್ತಿಗಳನ್ನು ಕರೆದುಕೊಂಡು ಬಂದಿದ್ದರಿಂದ ಹಾಗೂ ವಾಸಸ್ಥಳದ ಬಗ್ಗೆ ತಪ್ಪು ಮಾಹಿತಿ ನೀಡಿದ್ದರಿಂದ, ಜಾಗೇರಿಯ ನಿವಾಸಿಯಾದ ಸೋದರಮಾವನ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಹಾಗೂ ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.