ಚಾಮರಾಜನಗರದಲ್ಲಿ ಎರಡನೇ ಕೋವಿಡ್ ಪ್ರಕರಣ : ತಮಿಳುನಾಡಿಗೆ ಹೋಗಿಬಂದ ವ್ಯಕ್ತಿಯಲ್ಲಿ ಸೋಂಕು ದೃಢ
Team Udayavani, Jun 20, 2020, 1:23 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಎರಡನೇ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಗುಂಡ್ಲುಪೇಟೆ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ 39 ವರ್ಷದ ಸರಕು ಸಾಗಾಣಿಕೆ ವಾಹನ ಚಾಲಕನಿಗೆ ಕೋವಿಡ್ ದೃಢಪಟ್ಟಿದೆ.
ಜಿಲ್ಲಾಧಿಕಾರಿ ಡಾ. ಎಂ. ರವಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈರುಳ್ಳಿ ಸಾಗಾಣಿಕೆ ಮಾಡುವ ಈ ಚಾಲಕ ತಮಿಳುನಾಡಿಗೆ ಈ ವಾರದಲ್ಲಿ ಮೂರು ಬಾರಿ ಹೋಗಿ ಬಂದಿದ್ದ. ಜೂ. 18ರಂದು ಕೆಮ್ಮಿನ ಕಾರಣ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದು, ಅಲ್ಲಿ ಈತನ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂ. 19ರಂದು ಪ್ರಕರಣ ದೃಢಪಟ್ಟಿದೆ ಎಂದು ತಿಳಿಸಿದರು.
ಈಗ ಸೋಂಕಿತನನ್ನು ಚಾಮರಾಜನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನ ಪತ್ನಿ, ಮೂವರು ಮಕ್ಕಳು ಮತ್ತಿತರರ 10 ಮಂದಿಯನ್ನು ಪ್ರಾಥಮಿಕ ಸೋಂಕಿತರು ಎಂದು ಗುರುತಿಸಲಾಗಿದೆ. ಇವರು ವಾಸವಿದ್ದ ಸುತ್ತ ಮುತ್ತಲ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಪರಿಗಣಿಸಿ, ಪ್ರಾಥಮಿಕ ಸಂಪರ್ಕಿತರನ್ನು ಅವರವರ ಮನೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಕಂಟೈನ್ಮೆಂಟ್ ವಲಯ ಎಂದು ಘೋಷಿಸಿರುವುದರಿಂದ ಆ ವಲಯದ ಜನರು ಮನೆಯಿಂದ ಹೊರಗೆ ಬರುವಂತಿಲ್ಲ ಎಂದು ಹೇಳಿದರು.
ಸೋಂಕಿತ ಗುಂಡ್ಲುಪೇಟೆಯಲ್ಲಿ ಓಡಾಡಿರಬಹುದಾದ ಸ್ಥಳಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ನಿರ್ಬಂಧಿತ ವಲಯದಲ್ಲಿ ಇನ್ಸಿಡೆಂಟ್ ಕಮಾಂಡೆಂಟ್ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಜಿಲ್ಲೆಯ ಮೊದಲನೇ ಕಂಟೈನ್ಮೆಂಟ್ ವಲಯ.
ಕಂಟೈನ್ಮೆಟ್ ವಲಯದಲ್ಲಿರುವ ಜನರಿಗೆ ಎಲ್ಲ ರೀತಿಯ ಮೂಲಸೌಕರ್ಯಗಳು, ದಿನಬಳಕೆಯ ವಸ್ತುಗಳು, ಔಷಧಿಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುತ್ತೇವೆ. ಅಂಗಡಿಗಳನ್ನು ಮುಚ್ಚಿಸಲಾಗಿದೆ. ಈ ಪ್ರದೇಶದೊಳಕ್ಕೆ ಸಾರ್ವಜನಿಕರು ಹೋಗುವಂತಿಲ್ಲ. ಅವರು ಈ ವಲಯದಿಂದ ಈಚೆ ಬರುವಂತಿಲ್ಲ. ಕಂಟೈನ್ಮೆಂಟ್ ವಲಯದಲ್ಲಿರುವವರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುವುದು. ಮಕ್ಕಳು, 60 ವರ್ಷ ಮೇಲ್ಪಟ್ಟವರಿದ್ದು ಅವರಿಗೆ ಗಂಭೀರ ಕಾಯಿಲೆ ಇರುವವರನ್ನು ಪರಿಶೀಲನೆ ನಡೆಸಲಾಗುವುದು ಎಂದು ಡೀಸಿ ವಿವರಿಸಿದರು.
ಮುಂಬೈ ಸೋಂಕಿತ ಗುಣಮುಖ: ಮುಂಬೈನಿಂದ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿ ಕೋವಿಡ್ನಿಂದ ಸಂಪೂರ್ಣ ಗುಣಮುಖನಾಗಿ ಜಕ್ಕಳ್ಳಿಯ ತಮ್ಮ ಬಂಧುವಿನ ಮನೆಗೆ ಹೋಗಿದ್ದಾರೆ. ಆತನ ತಾಯಿ ಮತ್ತು ಸೋದರ ಸಹ ಅಲ್ಲೇ ಇದ್ದಾರೆ. 14 ದಿನಗಳ ಕ್ವಾರಂಟೈನ್ ಮುಗಿಸಿದ ನಂತರ ಮುಂಬೈಗೆ ಕಳುಹಿಸಿಕೊಡಲಾಗುವುದು ಎಂದು ಡಾ. ರವಿ ತಿಳಿಸಿದರು.
ಎಸ್ಪಿ ಆನಂದಕುಮಾರ್ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿ ನಮ್ಮ ಜಿಲ್ಲೆಗೆ ಮುಂಬೈಯಿಂದ ಮಾಹಿತಿ ನೀಡದೇ ಬಂದಿದ್ದು ಅಪರಾಧವಾಗಿದೆ. ಇವರನ್ನು ಸೋದರಮಾವ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಕರೆದುಕೊಂಡು ಬಂದಿದ್ದಾರೆ. ಅನುಮತಿ ಪಡೆಯದೇ ಅನ್ಯ ರಾಜ್ಯದ ವ್ಯಕ್ತಿಗಳನ್ನು ಕರೆದುಕೊಂಡು ಬಂದಿದ್ದರಿಂದ ಹಾಗೂ ವಾಸಸ್ಥಳದ ಬಗ್ಗೆ ತಪ್ಪು ಮಾಹಿತಿ ನೀಡಿದ್ದರಿಂದ, ಜಾಗೇರಿಯ ನಿವಾಸಿಯಾದ ಸೋದರಮಾವನ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಹಾಗೂ ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ