ಚಾಮರಾಜಪೇಟೆ ಗಣೇಶೋತ್ಸವ:ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ: ಸಿಎಂ
ಬಹುಜನರ ಬೇಡಿಕೆ ಈಡೇರಿಸುವ ಕೆಲಸ ಮಾಡುತ್ತೇವೆ
Team Udayavani, Aug 26, 2022, 7:37 PM IST
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕುರಿತು ಹೈಕೋರ್ಟ್ ತೀರ್ಪು ಬಂದಿದ್ದು, ನಾಳೆ ಕಂದಾಯ ಸಚಿವರು ,ಎಜೆ ಜತೆ ಸಭೆ ಮಾಡಿ ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೈಕೋರ್ಟ್ ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.
ಬಹುಜನರ ಬೇಡಿಕೆ ಈಡೇರಿಸುವ ಕೆಲಸ ಮಾಡುತ್ತೇವೆ.ಯಾರು ಹಬ್ಬ ಆಚರಣೆ ಮಾಡಬೇಕು ಎಂಬ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ.ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಮಿತಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ ಮಾರ್ಗ ಸೂಚಿಗಳನ್ನು ಅನುಸರಿಸಬೇಕು ಎಂದರು.
ಈಗಾಗಲೇ ಈದ್ಗಾ ಮೈದಾನದಲ್ಲಿ ಭಾರಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆಗಳನ್ನೂ ಸ್ಥಳಕ್ಕೆ ಕಳುಹಿಸಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ