ಹಲವು ವಿದ್ಯಾರ್ಥಿನಿಯರ ವಿಡಿಯೋಗಳು ಸೋರಿಕೆಯಾಗಿಲ್ಲ: ಚಂಡೀಗಢ ವಿವಿ
ವಿದ್ಯಾರ್ಥಿನಿಯರ ವಿಚಾರದಲ್ಲಿ ಹಲವು ವದಂತಿಗಳನ್ನು ಹಬ್ಬಿಸಲಾಗುತ್ತಿದೆ...
Team Udayavani, Sep 18, 2022, 5:38 PM IST
ಚಂಡೀಗಢ: ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳು ಸೋರಿಕೆಯಾಗಿದೆ ಎಂಬ ಹೇಳಿಕೆಯನ್ನು ಚಂಡೀಗಢ ವಿಶ್ವವಿದ್ಯಾನಿಲಯವು ಭಾನುವಾರ ನಿರಾಕರಿಸಿದ್ದು, ಆನ್ಲೈನ್ನಲ್ಲಿ ಪ್ರಸಾರವಾದ ವೈಯಕ್ತಿಕ ವೀಡಿಯೊವನ್ನು ಒಬ್ಬ ವಿದ್ಯಾರ್ಥಿನಿ ಮಾತ್ರ ಹಂಚಿಕೊಂಡಿದ್ದಾಳೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯನ್ನು ಈಗಾಗಲೇ ಬಂಧಿಸಿದೆ ಎಂದು ಹೇಳಿದೆ.
ಇದನ್ನೂ ಓದಿ: ಜಾರ್ಖಂಡ್ ಮಾವೋವಾದಿ ನಾಯಕ ಮಹಾರಾಷ್ಟ್ರದಲ್ಲಿ ಬಂಧನ
ಚಂಡೀಗಢ ವಿವಿಯ ಉಪ ಕುಲಪತಿ ಡಾ.ಆರ್.ಎಸ್.ಬಾವಾ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ವಿದ್ಯಾರ್ಥಿಗಳ 60 ಆಕ್ಷೇಪಾರ್ಹ ಎಂಎಂಎಸ್ ಪತ್ತೆಯಾಗಿದೆ ಎಂದು ಮಾಧ್ಯಮಗಳ ಮೂಲಕ ಹರಡುತ್ತಿರುವ ವದಂತಿಯು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತವಾಗಿದೆ.ಯಾವುದೇ ವಿಡಿಯೋಗಳು ಕಂಡುಬಂದಿಲ್ಲ. ಒಬ್ಬ ಹುಡುಗಿ ಚಿತ್ರೀಕರಿಸಿದ ವೈಯಕ್ತಿಕ ವಿಡಿಯೋವನ್ನು ತನ್ನ ಗೆಳೆಯನಿಗೆ ಹಂಚಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.
“ಇದುವರೆಗೆ ನಮ್ಮ ತನಿಖೆಯಲ್ಲಿ, ಆರೋಪಿಯ ಒಂದು ವಿಡಿಯೋ ಮಾತ್ರ ಇದೆ ಎಂದು ನಾವು ಕಂಡುಕೊಂಡಿದ್ದೇವೆ. ಅವಳು ಬೇರೆಯವರ ಯಾವುದೇ ವಿಡಿಯೋಗಳನ್ನು ರೆಕಾರ್ಡ್ ಮಾಡಿಲ್ಲ” ಎಂದು ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಹೇಳಿದ್ದಾರೆ. ಇದು ಗಂಭೀರ ವಿಷಯ, ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಬಿಡುವುದಿಲ್ಲ ಎಂದು ಎಲ್ಲಾ ವಿದ್ಯಾರ್ಥಿಗಳ ಪೋಷಕರಿಗೆ ಭರವಸೆ ನೀಡಲು ನಾನು ಇಲ್ಲಿದ್ದೇನೆ” ಎಂದು ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭಾನುವಾರ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ”ಅಹಿತಕರ ಘಟನೆಯ ಬಗ್ಗೆ ಕೇಳಲು ದುಃಖವಾಗಿದೆ… ನಮ್ಮ ಹೆಣ್ಣುಮಕ್ಕಳು ನಮ್ಮ ಹೆಮ್ಮೆ… ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ…ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮಾನ್ ಟ್ವೀಟ್ ಮಾಡಿದ್ದಾರೆ.
“ನಾನು ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ. ವದಂತಿಗಳನ್ನು ನಂಬಬೇಡಿ” ಎಂದು ಜನರಿಗೆ ಮನವಿ ಮಾಡಿದ್ದಾರೆ.
ಘಟನೆ ಬಯಲಿಗೆ ಬರುತ್ತಿದ್ದಂತೆ ಶನಿವಾರ ತಡರಾತ್ರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ತೆರಳಿ ಪ್ರತಿಭಟನೆ ನಡೆಸಿದ್ದರು.
ಎಂಟು ಮಂದಿ ಹಾಸ್ಟೆಲ್ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದು, ಇದು ಕೇವಲ ವದಂತಿ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು