ಇಂದು ಚಾಂದ್ರಮಾನ ಯುಗಾದಿ; ದೇವಸ್ಥಾನಗಳಲ್ಲಿ ವಿಶೇಷ ಪೂಜೆ


Team Udayavani, Apr 13, 2021, 6:45 AM IST

ಇಂದು ಚಾಂದ್ರಮಾನ ಯುಗಾದಿ; ವಿಶೇಷ ಪೂಜೆ

ಮಹಾನಗರ: ಹಿಂದೂಗಳ ಹೊಸ ವರ್ಷವೆಂದೇ ಆಚರಿಸಲ್ಪಡುವ ಯುಗಾದಿ ಹಬ್ಬ ಮತ್ತೆ ಬಂದಿದ್ದು ಮಂಗಳವಾರ ಆಚರಿಸಲು ಎಲ್ಲೆಡೆ ಸರ್ವ ಸಿದ್ಧತೆ ನಡೆಸಲಾಗಿದೆ. ಮಂಗಳವಾರ ಚಾಂದ್ರಮಾನ ಯುಗಾದಿ ಹಾಗೂ ಬುಧವಾರ ಸೌರಮಾನ ಯುಗಾದಿ ಆಚರಣೆಗೆಂದು ನಗರದ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸದ್ಯ ಕೊರೊನಾ ಎರಡನೇ ಅಲೆಯ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೀಮಿತ ಭಕ್ತರ ಉಪಸ್ಥಿತಿಯಲ್ಲಿ, ಕೊರೊನಾ ಮುನ್ನೆಚ್ಚರಿಕೆ ವಹಿಸಿಕೊಂಡು ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ. ಭಕ್ತರು ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಪಾಲಿಸುವ ನಿಟ್ಟಿನಲ್ಲಿ ವಿವಿಧ ದೇವಸ್ಥಾನದಲ್ಲಿ ಸೂಚನೆ ನೀಡಲಾಗಿದೆ.

ಖರೀದಿ ಸಂಭ್ರಮ
ಎರಡು ಯುಗಾದಿ ಹಬ್ಬಗಳನ್ನು ಒಂದು ದಿನದ ಅಂತರದಲ್ಲಿ ಎ. 13 (ಚಾಂದ್ರಮಾನ ಯುಗಾದಿ) ಮತ್ತು 14 ರಂದು (ಸೌರಮಾನ ಯುಗಾದಿ) ಆಚರಿಸಲು ಸಿದ್ಧತೆಗಳು ನಡೆದಿದ್ದು, ಮಂಗಳೂರಿನ ಮಾರುಕಟ್ಟೆಯಲ್ಲಿ ಹಬ್ಬ ಆಚರಣೆಗೆ ಬೇಕಾದ ವಸ್ತುಗಳ ಮಾರಾಟ ಮತ್ತು ಖರೀದಿ ಭರದಿಂದ ಸಾಗಿದೆ.

ಯುಗಾದಿ ಆಚರಣೆಯ ಪ್ರಮುಖ ಆಕರ್ಷಣೆಗಳಾದ ಎಳ್ಳು, ಬೆಲ್ಲ, ಹೂವು ಮಾತ್ರವಲ್ಲದೆ ಅತ್ಯಾವಶ್ಯಕ ಸ್ಥಳೀಯ ತರಕಾರಿಗಳಾದ ತೊಂಡೆಕಾಯಿ, ಅಲಸಂಡೆ, ದೀವಿಗುಜ್ಜೆ, ಹಸಿ ಗೇರು ಬೀಜ ಮಾರುಕಟ್ಟೆಗೆ ಧಾರಾಳವಾಗಿ ಆವಕವಾಗಿವೆ. ದೀವಿಗುಜ್ಜೆ ಬೆಲೆ 80 – 100 ರೂ., ಸ್ಥಳೀಯ ತೊಂಡೆಕಾಯಿ ದರ 80 ರೂ., ಸ್ಥಳೀಯ ಅಲಸಂಡೆ 80 ರೂ. ಹಾಗೂ ಹಸಿ ಗೇರು ಬೀಜ (100ಕ್ಕೆ) ಬೆಲೆ 300 ರೂ. ಇದೆ.

ಮೂಡುಬಿದಿರೆ ತಾ|ನಲ್ಲಿ ಸಿದ್ಧತೆ
ಮೂಡುಬಿದಿರೆ: ಮಂಗಳವಾರ ಒದಗಿ ಬಂದಿರುವ ಚಾಂದ್ರಮಾನ ಯುಗಾದಿ ಹಾಗೂ ಬುಧವಾರ ನಡೆಯಲಿರುವ ಸೌರಮಾನ ಯುಗಾದಿಗೆ ಮೂಡುಬಿದಿರೆ ತಾಲೂಕಿನಾದ್ಯಂತ ಆರಾಧನ ಕೇಂದ್ರಗಳು, ಮನೆತನಗಳು ಹಾಗೂ ವೈಯಕ್ತಿಕ ಮನೆಗಳಲ್ಲಿ ಸಿದ್ಧತೆ ನಡೆದಿದೆ. ಮೂಡುಬಿದಿರೆ ಶ್ರೀಗುರುಮಠ ಕಾಳಿ ಕಾಂಬಾ ದೇವಸ್ಥಾನ, ಮೂಡು ವೇಣುಪುರ ಶ್ರೀ ವೆಂಕಟರಮಣ ದೇವಸ್ಥಾನ, ಪೊನ್ನೆಚಾರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ ಸಹಿತ ವಿವಿಧ ದೇವಸ್ಥಾನಗಳಲ್ಲಿ ಮಂಗಳವಾರ ಚಾಂದ್ರಮಾನ ಯುಗಾದಿಯನ್ನು, ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಸೌರಮಾನ ಯುಗಾದಿಯನ್ನು ವಿಶೇಷ ಆರಾಧನೆ, ಬೇವುಬೆಲ್ಲ ವಿತರಣೆ, ಪಂಚಾಂಗ ಶ್ರವಣ ಸಹಿತ ಆಚರಿಸಲಾಗುವುದು.

108 ದಿವ್ಯಸಾಗರ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಮೂಡುಬಿದಿರೆಯ ಜೈನಮಠ, ಬಸದಿಗಳಲ್ಲಿ , ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಯುಗಾದಿ ಹಬ್ಟಾಚರಣೆಯಂಗವಾಗಿ ಮಂಗಳವಾರ ವಿಶೇಷ ಪೂಜೆ,ಅಭಿಷೇಕ, ಸಾವಿರ ಕಂಬದ ಬಸದಿಯಲ್ಲಿ ಪಟ್ಟದ ಪುರೋಹಿತರಿಂದ ಪಂಚಾಂಗ ಶ್ರವಣ, ಅಸಿ, ಮಸಿ, ವಾಣಿಜ್ಯ, ಕೃಷಿ, ವಿದ್ಯೆ, ಶಿಲ್ಪಕಲೆ ಈ ಆರು ಕ್ರಿಯೆಗಳ ಮೂಲಕ ನಡೆಯುವ ಜೀವನಯಾಪನ ಕ್ರಮವನ್ನು ಬೋಧಿಸಿದ ಭ| ಆದಿನಾಥ ಸ್ವಾಮಿಯ ಚರಣಪೂಜೆ ನಡೆಯಲಿದ್ದು ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು. ಉಳ್ಳಾಲ ವ್ಯಾಪ್ತಿಯಲ್ಲಿ ಯುಗಾದಿ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಜರಗಲಿವೆ.

ಮೂಲ್ಕಿ: ವಿಶೇಷ ಪೂಜೆ
ಮೂಲ್ಕಿ: ಯುಗಾದಿ ಮತ್ತು ವಿಷು ಆಚರಣೆಯ ಅಂಗವಾಗಿ ಮೂಲ್ಕಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಜರಗಲಿದೆ. ಚಾಂದ್ರಮಾನ ಯುಗಾದಿಯ ಪ್ರಯುಕ್ತ ಮೂಲ್ಕಿ ಶ್ರೀ ವೆಂಕಟರಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ನೂತನ ಪಂಚಾಂಗ ವಾಚನ, ರಾತ್ರಿ ಉತ್ಸವ ಜರಗಲಿದೆ. ಸೌರಮಾನ ಯುಗಾದಿ(ವಿಷು) ಆಚರಣೆ ಪ್ರಯುಕ್ತ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಹೂವಿನ ಅಲಂಕಾರ ನಡೆಯಲಿದೆ. ಮಾಗಣೆಯ ಬೈಲ ಉಡುಪರು ದೇಗುಲದ ಹೊರಗಿನಕಟ್ಟೆಯಲ್ಲಿ ಕುಳಿತು ನೂತನ ಪಂಚಾಂಗವನ್ನು ವಾಚಿಸುತ್ತಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.