ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಹಂತಕರನ್ನು 4 ಗಂಟೆಗಳಲ್ಲಿ ಪತ್ತೆ ಹಚ್ಚಿದ್ಹೇಗೆ!
ಕಾಮಗಾರಿಯಲ್ಲಿದ್ದ ಜೆಸಿಬಿಯನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಪೊಲೀಸರು!
Team Udayavani, Jul 5, 2022, 6:33 PM IST
ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೇವಲ ನಾಲ್ಕು ಗಂಟೆ ಅವಧಿಯಲ್ಲಿ ರಾಮದುರ್ಗ ಪೊಲೀಸರು ಮುಳ್ಳೂರು ಘಾಟ್ ಬಳಿಯ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಲೆ ನಡೆಸಿ ಪರಾರಿಯಾಗುತ್ತಿದ್ದಂತೆ ಪೊಲೀಸರು ಅಕ್ಕಪಕ್ಕದ ಜಿಲ್ಲೆಯ ಪೊಲೀಸರನ್ನು ಅಲರ್ಟ್ ಮಾಡಿದ್ದರು. ಆರೋಪಿಗಳ ಮೊಬೈಲ್ ಲೋಕೇಶನ್ ಟ್ರೇಸ್ ಮಾಡುತ್ತಿದ್ದರು. ಈ ವೇಳೆ ರಾಮದುರ್ಗದ ಬಳಿ ಪೊಲೀಸರು ವಾಹನಗಳ ತಪಾಸಣೆ ಮಾಡುವ ವೇಳೆ ಮಹಾಂತೇಶ ಹಾಗೂ ಮಂಜುನಾಥ ಇದ್ದ ಕಾರು ಆಗಮಿಸಿದೆ. ಕೆಳಗೆ ಇಳಿಯುವಂತೆ ಸೂಚಿಸಿದರೂ ಇಳಿಯದಿದ್ದಾಗ ಡಿವೈಎಸ್ಪಿ ರಾಮನಗೌಡ ಹಟ್ಟಿ ಸರ್ವಿಸ್ ರಿವಾಲ್ವಾರ್ ಹಿಡಿದು ಶೂಟ್ ಮಾಡುವುದಾಗಿ ಎಚ್ಚರಿಸಿದ್ದಾರೆ. ಪ್ರತಿರೋಧ ತೋರದೆ ಆರೋಪಿಗಳು ಶರಣಾಗಿದ್ದಾರೆ.
ಆರೋಪಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಕಾಮಗಾರಿಯಲ್ಲಿದ್ದ ಜೆಸಿಬಿಯನ್ನು ಕೂಡ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದರು. ಹೆಚ್ಚಿನ ಭದ್ರತೆಯೊಂದಿಗೆ ನಾಕಾಬಂದಿ ಮಾಡಲಾಗಿತ್ತು. ಆರೋಪಿಗಳು ಕೊಲೆ ಮಾಡಿದ ನಂತರ ಧರಿಸಿದ್ದ ಬಟ್ಟೆಯನ್ನು ಬದಲಿಸಿಕೊಂಡಿದ್ದರು. ಕೊಲೆ ನಂತರ ಪರಾರಿಯಾಗಲು ಕಾರ್ ವ್ಯವಸ್ಥೆಯನ್ನು ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ
ಪ್ರಮುಖ ರಸ್ತೆಗಳ ಮೂಲಕ ಹೋದರೆ ಟೋಲ್ ನಾಕಾ ಇತರೆ ತೊಂದರೆ ಒದಗಬಹುದು ಎಂದು ರಾಜ್ಯ ಹೆದ್ದಾರಿ ಮೂಲಕ ಪರಾರಿಯಾಗಲು ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ