ಚಂದ್ರು, ಹರ್ಷ, ಪ್ರವೀಣ, ನಾಳೆ ಇನ್ಯಾರೋ ? ಸಿ.ಟಿ.ರವಿ, ರೇಣುಕಾಚಾರ್ಯ ಬೇಸರ

ಹತ್ಯೆ ಖಂಡನೀಯ ಎಂದ ಬಿ.ಕೆ.ಹರಿಪ್ರಸಾದ್

Team Udayavani, Jul 27, 2022, 1:20 PM IST

C-T-ravi

ಬೆಂಗಳೂರು :ಚಂದ್ರ, ಹರ್ಷ, ಪ್ರವೀಣ ನಾಳೆ ಇನ್ಯಾರೋ ? ಎಂದು ಬಿಜೆಪಿ ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧವೇ ಸಿ.ಟಿ. ರವಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇಂಥ ಘಟನೆಗಳಿಂದ ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ? ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕರ್ತರ ಭಾವನೆ ಜೊತೆಗೆ ನಾವು ಇದ್ದೇವೆ. ನಾವು ಕೇವಲ ಅಧಿಕಾರ ಮಾಡಲು ಬಂದಿಲ್ಲ. ಜಿಹಾದ್  ವಿರುದ್ಧ ಹೋರಾಟಕ್ಕೆ ಅಣಿಗೊಳಿಸಬೇಕು. ಇದು ರಾಜಸ್ಥಾನದಲ್ಲಿ ನಡೆದ  ಘಟನೆಯ ಒಂದು  ಭಾಗ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದರ ಅಂತ್ಯ ಯಾವಾಗ?

ಹಿಂದೂ‌ ಸಂಘಟನೆ, ನಮ್ಮ‌ಕರ್ಯಕರ್ತರು ಟಾರ್ಗೆಟ್ ಆಗಿದ್ದಾರೆ, ಇದರ ಅಂತ್ಯ ಯಾವಾಗ? ಯುಪಿ‌ ಸಿಎಂ‌ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಇವರನ್ನ ಹದುಬಸ್ತಿನಲ್ಲಿ‌ಇಡಬೇಕು ಎಂದು ಸಿಎಂ‌ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಇದನ್ನ ಗಂಭೀರವಾಗಿ ಪರಿಗಣಿಸುತ್ತಾರೆ. ಕಾಂಗ್ರೆಸ್ ಕಾಲದಲ್ಲಿ 10-15ಜನರ ಹತ್ಯೆ ಆಗುತ್ತಿತ್ತು.ಈಗ ಕಂಟ್ರೋಲ್ ಆಗಿದೆ. ಸಿಎಂ ಭೇಟಿ ಮಾಡಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ನನಗೆ ಬೆದರಿಕೆ ಕರೆ ಬಂದಿತ್ತು, ಆರೋಪಿಗಳನ್ನ ಪತ್ತೆ ಹಚ್ಚಲಾಗಿಲ್ಲ.ನನ್ನಂತವರಿಗೆ ಹೀಗಾದರೆ ಇನ್ನು ಸಾಮಾನ್ಯ ಕಾರ್ಯಕರ್ತರ ಪಾಡೇನು. ನಾನೇನು ಹೆದರುವುದಿಲ್ಲ. ನಾನು ಸಾವಿರಾರು ಜನರ ನಡುವೆ ಇರುತ್ತೇನೆ. ಹೊನ್ನಾಳಿಯಲ್ಲಿ ಮಾರಿಕಾಂಬಾ ಉತ್ಸವದಲ್ಲಿ ಇದ್ದೆ.ಹೊನ್ನಾಳಿ ಯುವಕರು ನನಗೆ ಬೆಂಗಾವಲಾಗಿದ್ದರು.
ಹಾಗಂತ ನಾನು ಸರ್ಕಾರದ ವಿರುದ್ಧ ಮಾತನಾಡುತ್ತಿಲ್ಲ.ಇಂತವರ ಸೆದೆ ಬಡೆದ ಮೇಲೆ ಅವರ ಆತ್ಮಕ್ಕೆ ಶಾಂತಿ ಸಿಗಲಿದೆ. ಪ್ರವೀಣ್ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ಕುಟುಂಬಕ್ಕೆ ಈಗಲೇ ಕಳಿಸುತ್ತೇನೆ ಎಂದರು.

ಹತ್ಯೆ ಖಂಡನೀಯ : ಬಿ.ಕೆ.ಹರಿಪ್ರಸಾದ್

”ಬಿಲ್ಲವ ಯುವ ವಾಹಿನಿಯ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಸರ್ಕಾರ ತನಿಖೆಗೂ ಮೊದಲೇ ಪೂರ್ವಗ್ರಹ ಪೀಡತರಾಗದೆ “ನೈಜ” ಕೊಲೆಗಡುಕರನ್ನ ಪತ್ತೆ ಹಚ್ಚಿ ಬಂಧಿಸಬೇಕು. ಅಮಾಯಕ ಯುವಕರ ಹತ್ಯೆಗಳು ನಿಲ್ಲಬೇಕಿದೆ. ಕರಾವಳಿ ಜನತೆ ಯಾವುದೇ ಉತ್ಪ್ರೇಕ್ಷೆಗೆ ಒಳಗಾಗದೆ ಶಾಂತಿ ಕಾಪಾಡಲಿ” ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.