3 ದಿನದಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಅರಣ್ಯ: ಬದುಕುಳಿಯಲು ಮನೆ ಬಳಿ ಬಂದ ಕಾಳಿಂಗ

ಕಾಡಂಚಿನ ಗ್ರಾಮಗಳ ಜನರಲ್ಲಿ ಆತಂಕ, ಭಯದಲ್ಲಿ ಬದುಕುವಂತಾಗಿದೆ ಚಾರ್ಮಾಡಿ ಸುತ್ತಮುತ್ತಲಿನ ಜನ

Team Udayavani, Mar 7, 2023, 7:28 PM IST

kalinga

ಕೊಟ್ಟಿಗೆಹಾರ: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ.

ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ ನಾಡಿನತ್ತ ಮುಖ ಮಾಡಿವೆ. ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಆಶ್ರಯ ಪಡೆದುಕೊಳ್ಳಲು ಜಾಗ ಹುಡುಕುತ್ತಿರುವಾಗ ಸ್ಥಳಿಯರ ಕಣ್ಣಿಗೆ ಬಿದ್ದು ಸೆರೆಯಾಗಿದೆ.

ತುರುವೆ ಗ್ರಾಮದ ಸಮುದಾಯ ಭವನದ ಬಳಿ ಬಂದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಬೆಚ್ಚನೆಯ ಜಾಗ ಹುಡುಕುತ್ತಿದ್ದ ವೇಳೆ ಸ್ಥಳಿಯರ ಕಣ್ಣಿಗೆ ಬಿದ್ದಿದೆ. ದೈತ್ಯಾಕಾರದ ಕಾಳಿಂಗ ಸರ್ಪವನ್ನ ಕಂಡ ಸ್ಥಳಿಯರು ಆತಂಕದಿಂದ ಕೂಗಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ನಡೆಸಿ ದೈತ್ಯ ಕಾಳಿಂಗನನ್ನ ಸೆರಿ ಹಿಡಿದಿದ್ದಾರೆ. ಸೆರೆ ಹಿಡಿದು ಬಳಿಕ ತೀವ್ರ ನಿತ್ರಾಣಗೊಂಡಿದ್ದ ಕಾಳಿಂಗ ಸರ್ಪಕ್ಕೆ ಹಾವಾಡಿಗ ನೀರು ಕುಡಿಸಿದ್ದಾನೆ. ಈ ಕಾಳಿಂಗ ಸರ್ಪ ಎಷ್ಟು ದೈತ್ಯಾಕಾರವಿದೆ ಅಂದ್ರೆ, ಸೆರೆ ಹಿಡಿದ ಸ್ನೇಕ್ ಆರೀಫ್ ಅದನ್ನ ಎತ್ತಿಕೊಳ್ಳಲು ಕಷ್ಟಪಡಬೇಕಾದಷ್ಟು ಭಾರವಾಗಿತ್ತು ಈ ಕಾಳಿಂಗ ಸರ್ಪ.

ಕೊನೆಗೆ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟಿಯಲ್ಲೇ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ, ಚಾರ್ಮಾಡಿ ಘಾಟಿಯ ಸುತ್ತಮುತ್ತಲಿನ ಜನ ಭಯದಲ್ಲಿ ಬದುಕುವಂತಾಗಿದೆ. ಅರಣ್ಯಕ್ಕೆ ಬಿದ್ದಿರೋ ಬೆಂಕಿ ನಿಲ್ಲುವಂತೆ ಕಾಣುತ್ತಿಲ್ಲ. ಮೂರು ದಿನಗಳಿಂದ ಒಂದೇ ಸಮನೆ ಹೊತ್ತಿ ಧಗಧಗಿಸುತ್ತಿದೆ. ಈ ವೇಳೆ ಕಾಡುಪ್ರಾಣಿಗಳು ಕಾಡಂಚಿನ ಗ್ರಾಮಗಳಿಗೆ ಬಂದರೆ ಏನು ಮಾಡುವುದು, ಬದುಕುವುದು ಹೇಗೆಂದು ಜನ ಆತಂಕದಿಂದ ಬದುಕುತ್ತಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣ ನಾವು ಸಂಪಾದಿಸಿದ್ದು;ಗಳಗಳನೆ ಅತ್ತ ಮಾಡಾಳ್ ವಿರೂಪಾಕ್ಷಪ್ಪ!

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.