ಕಣ-ಚಿತ್ರಣ: ಚೆಲುವನ ಬೀಡಲ್ಲಿ ದಳ, ರೈತಸಂಘದ್ದೇ ಪಾರುಪತ್ಯ

ಮೇಲುಕೋಟೆ ವಿಧಾನಸಭಾ ಕ್ಷೇತ್ರ

Team Udayavani, Apr 29, 2023, 8:25 AM IST

MELUKOTE

ಮಂಡ್ಯ: ಶ್ರೀ ಚೆಲುವನಾರಾಯಣನ ನೆಲೆ ಬೀಡಾಗಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರೂ ಜೆಡಿಎಸ್‌ ಹಾಗೂ ರೈತಸಂಘ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಬಿಜೆಪಿ ಪಡೆಯುವ ಮತಗಳ ಮೇಲೆ ಸೋಲು-ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ.
ಕಳೆದ 2018ರ ಚುನಾವಣೆಯಲ್ಲಿ ದಿ. ಕೆ.ಎಸ್‌.ಪುಟ್ಟಣ್ಣಯ್ಯ ನಿಧನದ ಅನುಕಂಪದ ಅಲೆಯಲ್ಲೂ ದರ್ಶನ್‌ಪುಟ್ಟಣ್ಣಯ್ಯ ಪರಾ ಭವಗೊಂಡಿದ್ದರು. ಆದರೆ ಈ ಬಾರಿ ಗೆಲ್ಲಲೇಬೇಕು ಎಂಬ ನಿಟ್ಟಿನಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಶಾಸಕ ಸಿ.ಎಸ್‌. ಪುಟ್ಟರಾಜು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕವೇ ಮತ್ತೂಮ್ಮೆ ಗೆಲುವಿನ ನಗೆ ಬೀರಲು ಸಜ್ಜಾಗಿದ್ದಾರೆ.

ಅಭಿವೃದ್ಧಿಯೇ ಪುಟ್ಟರಾಜುಗೆ ಭರವಸೆ: 5 ವರ್ಷಗಳಲ್ಲಿ ಮೇಲುಕೋಟೆ ನೀರಾವರಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿ ದ್ದಾರೆ. 12 ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳ ನೀರು ತುಂಬಿಸಿದ್ದಾರೆ. ಅಲ್ಲದೆ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿಗೆ ಹೆಚ್ಚು ಮಹತ್ವ ನೀಡಿರುವುದು ಶಾಸಕ ಪುಟ್ಟರಾಜುಗೆ ಚುನಾವಣೆಯಲ್ಲಿ ಶ್ರೀರಕ್ಷೆ ಯಾಗಿದೆ. ಇದರ ಆಧಾರದ ಮೇಲೆಯೇ ಕ್ಷೇತ್ರದ ಜನರ ಬಳಿ ಹೋಗು ತ್ತಿದ್ದಾರೆ. ಅಲ್ಲದೆ ಕೊರೊನಾ ವೇಳೆ ಮಾಡಿದ ಕೆಲಸಗಳನ್ನೂ ಪ್ರಸ್ತಾವಿಸಿ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಗೆಲುವಿಗಾಗಿ ದರ್ಶನ್‌ ಕಸರತ್ತು: ದರ್ಶನ್‌ಪುಟ್ಟಣ್ಣಯ್ಯಗೆ ರೈತಸಂಘ, ಕಾಂಗ್ರೆಸ್‌ ಹಾಗೂ ಸುಮ ಲತಾ ಬೆಂಬಲವೂ ಸಿಕ್ಕಿದೆ. ಇದರ ಜತೆಗೆ ತಂದೆಯ ವರ್ಚಸ್ಸು, ಕಳೆದ ಬಾರಿಯ ಸೋಲಿನ ಅನುಕಂಪ ಈ ಬಾರಿ ಕೈಹಿಡಿಯಬಹುದು ಎಂಬ ಭರವಸೆ ಯಲ್ಲಿದ್ದಾರೆ. ಆದರೆ ಕಳೆದ ಬಾರಿ ಸೋತ ಅನಂತರ ಅಮೆರಿಕ ಸೇರಿದ ದರ್ಶನ್‌ಪುಟ್ಟಣ್ಣಯ್ಯ ಕಳೆದ ಡಿಸೆಂಬರ್‌ನಲ್ಲಿ ಕ್ಷೇತ್ರಕ್ಕೆ ಆಗಮಿಸಿದ್ದರು. ಅಲ್ಲದೆ ಅಮೆರಿಕದಲ್ಲಿರುವ ಆಸ್ತಿಗಳನ್ನು ಮಾರಾಟ ಮಾಡಿದ್ದೇನೆ ಎಂದು ಹೇಳಿದ್ದ ದರ್ಶನ್‌, ಚುನಾವಣೆ ಅಫಿದವಿತ್‌ ಅದಕ್ಕೆ ತದ್ವಿರುದ್ಧವಾಗಿ ಸಲ್ಲಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿರುವುದು ಮೈನಸ್‌ ಪಾಯಿಂಟ್‌ ಆಗಿದೆ. ಕಾಂಗ್ರೆಸ್‌, ಸುಮಲತಾ ಬೆಂಬಲಿಸುತ್ತಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ.

ಮೂವರು ಅಭ್ಯರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಇದರಿಂದ ಒಕ್ಕಲಿಗ ಮತಗಳು ಸ್ವಲ್ಪ ಚದುರುವ ಸಾಧ್ಯತೆ ಇದೆ. ಕೆಲವು ಲಿಂಗಾಯತ ಮತಗಳು ಬಿಜೆಪಿಗೆ ಅನುಕೂಲವಾದರೆ ಕಾಂಗ್ರೆಸ್‌, ರೈತಸಂಘ ಮತಗಳು ದರ್ಶನ್‌ ಪುಟ್ಟಣ್ಣಯ್ಯಗೆ ಸಿಗಬಹುದು.

ಬಿಜೆಪಿ ಬಲ ಹೆಚ್ಚಿಸಿದ ಇಂದ್ರೇಶ್‌: ಇಲ್ಲಿ ಬಿಜೆಪಿ ಬಲ ಹೆಚ್ಚಲು ಡಾ| ಎನ್‌.ಎಸ್‌.ಇಂದ್ರೇಶ್‌ ಕಾರಣ. 3 ವರ್ಷಗಳ ಹಿಂದೆ ಕ್ಷೇತ್ರಕ್ಕೆ ಆಗಮಿಸಿದಇಂದ್ರೇಶ್‌ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಗಮನಸೆಳೆದಿದ್ದಾರೆ. ಇಲ್ಲಿ ಮೋದಿ ಅಲೆ ಮ್ಯಾಜಿಕ್‌ ಮಾಡಬೇಕಾಗಿದೆ. ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದರೂ ಇಲ್ಲಿ ದರ್ಶನ್‌ ಬೆಂಬಲಿಸಿರುವುದು ಇಂದ್ರೇಶ್‌ಗೆ ಹಿನ್ನಡೆಯಾಗಿದೆ.

~ ಎಚ್‌.ಶಿವರಾಜು

 

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.