ಮಹಾತ್ಮಗಾಂಧಿ ಹತ್ಯೆ ಸಮರ್ಥನೆ, ಗೋಡ್ಸೆಗೆ ಬಹುಪರಾಕ್: ಕಾಳಿಚರಣ್ ವಿರುದ್ಧ FIR
ಕಾಂಗ್ರೆಸ್ ಮುಖಂಡ ಪ್ರಮೋದ್ ದುಬೆ ಅವರು ದೂರನ್ನು ದಾಖಲಿಸಿದ್ದರು.
Team Udayavani, Dec 27, 2021, 1:39 PM IST
ರಾಯ್ ಪುರ್: ರಾಷ್ಟ್ರಪಿತ ಮಹಾತ್ಮಗಾಂಧಿ ಹತ್ಯೆಯನ್ನು ಸಮರ್ಥಿಸಿಕೊಂಡು, ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿ ಹೇಳಿಕೆ ನೀಡಿರುವ ಆರೋಪದಡಿ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಮತ್ತು ಇತರರ ವಿರುದ್ಧ ಚತ್ತೀಸ್ ಗಢ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಕ್ಕಳ ಸಾವು ಅಪೌಷ್ಟಿಕತೆಯಿಂದ, ವ್ಯವಸ್ಥೆಯಿಂದಲ್ಲ; ಡಾ. ಸುಧಾಕರ್ ಸ್ಪಷ್ಟನೆ
ರಾಯ್ ಪುರ್ ನಲ್ಲಿ ಭಾನುವಾರ(ಡಿಸೆಂಬರ್ 26) ಧರ್ಮ್ ಸಂಸತ್ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕಾಳಿಚರಣ್, ಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿರುವುದಾಗಿ ವರದಿ ವಿವರಿಸಿದೆ.
ಮಹಾತ್ಮಗಾಂಧಿ ಹತ್ಯೆ ಕುರಿತಂತೆ ವಿವಾದಿತ ಹೇಳಿಕೆ ನೀಡಿದ್ದ ಧರ್ಮ ಗುರು ಕಾಳಿಚರಣ್ ವಿರುದ್ಧ ರಾಯ್ ಪುರ್ ನ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಪ್ರಮೋದ್ ದುಬೆ ಅವರು ದೂರನ್ನು ದಾಖಲಿಸಿದ್ದರು.
ಈ ದೂರಿನ ಆಧಾರದ ಮೇಲೆ ಟಿಕ್ರಾಪಾರಾ ಪೊಲೀಸ್ ಠಾಣೆಯಲ್ಲಿ ಕಾಳಿಚರಣ್ ವಿರುದ್ಧ ಐಪಿಸಿ ಸೆಕ್ಷನ್ 505(2), 294ರ ಅಡಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ