ವಿಕಲಚೇತನ ಬಾಲಕೀಯನ್ನು ಕೊಲೆಗೈದ ಆರೋಪಿಯ ಬಂಧನ
Team Udayavani, Jan 13, 2021, 10:01 PM IST
ಚಿಕ್ಕಬಳ್ಳಾಪುರ : ಜಿಲ್ಲೆಯ ಅಂಗರೇಕನಹಳ್ಳಿಯಲ್ಲಿ ಮೂಡನಂಬಿಕೆಯಿಂದ ಸ್ವಂತ ಅಣ್ಣನ ಮಗಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಚಿಕ್ಕಪನನ್ನು ಪೋಲಿಸರು ಬಂಧಿಸಿದ್ದಾರೆ.
ಶಂಕರ್ ಬಂಧಿತ ಆರೋಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗರೇಕನಹಳ್ಳಿಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಚಾರ್ವಿಕಾ ಎಂಬ ಬಾಲಕಿಯನ್ನು ಅಪಶಕುನವೆಂದು ಭಾವಿಸಿ ಆತನ ಚಿಕ್ಕಪ್ಪ ಶಂಕರ್ ಬಾಲಕೀಯ ಗಂಟಲು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದ ಈ ಸಂಬಂಧ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮೂರು ತಂಡಗಳನ್ನು ರಚಿಸಿ ಆರೋಪಿಯನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಶಿರಾಡಿ ಘಾಟಿಯಲ್ಲಿ ಖ್ಯಾತ ತುಳು ಚಿತ್ರ ನಟ ರೂಪೇಶ್ ಶೆಟ್ಟಿ ಕಾರು ಅಪಘಾತ
ವಿಕಲಚೇತನ ಬಾಲಕೀಯನ್ನು ಕೊಲೆ ಮಾಡಿದ ಆರೋಪಿ ಮೇಲೆ ಕಠಿಣ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ವಿಕಲಚೇತನರ ಸಂಘಟನೆಗಳ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು ಬಾಲಕೀಯನ್ನು ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.