ಅನೈತಿಕ ಸಂಬಂಧ ವಿಚಾರ ಗಲಾಟೆಯಲ್ಲಿ ವಯೋವೃದ್ಧೆಯ ಕೊಲೆ : ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಬಂಧನ
Team Udayavani, Nov 1, 2020, 9:56 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ವಯೋವೃದ್ಧೆಯನ್ನು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯನೊಬ್ಬ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಕೊಂಡಮ್ಮ ಕೋಂ ಲೇಟ್ ತಿಮ್ಮಯ್ಯ ಕೊಲೆಗೀಡಾದ ವಯೋವೃದ್ದೆ ಮಹಿಳೆ, ಆಕೆಯನ್ನು ಕೊಲೆ ಮಾಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
ಗಂಗಸಂದ್ರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್ ಅವರ ಇಟ್ಟಿಗೆ ಕಾರ್ಖಾನೆಯಲ್ಲಿ ಸರೋಜಮ್ಮ ಎಂಬಾಕೆಯ ಪತಿ ಗಂಗಪ್ಪ ಕೆಲಸ ಮಾಡುತ್ತಿದ್ದು ಆರೋಪಿ ವೆಂಕಟೇಶ್ ಕೊಲೆಗೀಡಾದ ಕೊಂಡಮ್ಮ ಸೊಸೆ ಸರೋಜಮ್ಮ ಎಂಬಾಕೆಯೊಂದಿಗೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದು ಈ ವಿಚಾರ ಬಹಿರಂಗಗೊಂಡ ಬಳಿಕ ಅನೇಕ ಬಾರಿ ಗಲಾಟೆಯಾಗಿದೆ ಇಂದು ಸಹ ಗಲಾಟೆಯಾಗಿ ಕೊಂಡಮ್ಮ ಎಂಬಾಕೆಯನ್ನು ಕೋಲಿಂದ ಹೊಡೆದು ಕೊಲೆ ಮಾಡಲಾಗಿದೆ.
ಇದನ್ನೂ ಓದಿ:ಉದ್ಘಾಟನೆಗೊಂಡ ಮೊದಲ ದಿನವೇ ಸೀಪ್ಲೇನ್ ಸಂಚಾರಕ್ಕೆ 3000 ಬುಕಿಂಗ್!
ಇದೇ ವೇಳೆಯಲ್ಲಿ ಆರೋಪಿ ವೆಂಕಟೇಶ್ ಸಹ ದ್ವಿಚಕ್ರ ವಾಹನದಲ್ಲಿ ಬಿದ್ದು ತಲೆಗೆ ಗಾಯಗೊಂಡಿದ್ದು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು