ಚಿಕ್ಕಮಗಳೂರು: ಕಾಂಗ್ರೆಸ್ ಸೇರುವ ಮುನ್ನವೇ ಟಿಕೆಟ್ ಆಸೆ ಹೊರಹಾಕಿದ ತಮ್ಮಯ್ಯ
ನಾನು ಬೈ ಬರ್ತ್ ಕಾಂಗ್ರೆಸ್...2004ರಲ್ಲಿ ಬಿಜೆಪಿ ಸೇರಿದ್ದೆ
Team Udayavani, Feb 18, 2023, 8:10 AM IST
ಚಿಕ್ಕಮಗಳೂರು: ಕಳೆದ 18 ವರ್ಷದಿಂದ ಬಿಜೆಪಿ ಬ್ಯಾನರ್ ಹಿಡಿದು, ಬಾವುಟ ಕಟ್ಟಿ ವಿವಿಧ ಹುದ್ಧೆಗಳನ್ನ ನಿರ್ವಹಿಸಿದ್ದೇನೆ. ನನಗೂ ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಟಿಕೆಟ್ ಬೇಕೆಂದು ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿ ಟಿಕೆಟ್ ಕೇಳಿದ್ದ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ಬಿಜೆಪಿಗೆ ಗುಡ್ಬೈ ಹೇಳಿ ಕಾಂಗ್ರೆಸ್ ಸೇರಲು ಬೆಂಬಲಿಗರ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ.
ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ಅತೃಪ್ತ ಆಪ್ತರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಲಿಂಗಾಯುತ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ತಮ್ಮಯ್ಯ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಂತೆ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಸಿ.ಟಿ.ರವಿ ವಿರುದ್ಧ ಬದಲಾವಣೆಯ ಸಂಕಲ್ಪ ಯಾತ್ರೆ ಆರಂಭಿಸಿರೋ ಹೆಚ್.ಡಿ.ತಮ್ಮಯ್ಯ ಇದೇ 19ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಲಿದ್ದಾರೆ.
ನಿನ್ನೆ ತಾನೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಹೆಚ್.ಡಿ ತಮ್ಮಯ್ಯ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ಗೆ ನಾನು ಯಾವುದೇ ಬೇಡಿಕೆ ಇಲ್ಲದೆ ಸೇರುತ್ತೇನೆ. ಈಗಾಗಲೇ 6 ಜನ ಟಿಕೆಟ್ಗಾಗಿ ಅರ್ಜಿ ಹಾಕಿದ್ದಾರೆ. ಗಾಯತ್ರಿ ಶಾಂತೇಗೌಡ ಹಾಕಿಲ್ಲ. ಅವರು ಹಾಗೂ ನನ್ನನ್ನ ಸೇರಿಸಿ ಸರ್ವೇ ಮಾಡಿಸಲಿ. ಎಂಟು ಜನರ ಹೆಸರಿನಲ್ಲೂ ಸರ್ವೇ ಮಾಡಿಸುತ್ತೇವೆ ಎಂದಿದ್ದಾರೆ.
ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ವೇ ಮಾಡಿಸಿ ಟಿಕೆಟ್ ನೀಡುತ್ತಿದೆ. ಯಾರಿಗೆ ಟಿಕೆಟ್ ಕೊಟ್ಟರೂ ನಾನು ಬೆಂಬಲ ನೀಡಲು ಸಿದ್ಧ. ನನಗೆ ಸಿಕ್ಕರೆ ಎಲ್ಲರೂ ಬೆಂಬಲ ನೀಡಲಿ ಎಂದು ಕೇಳಿಕೊಂಡಿದ್ದಾರೆ. ನನಗೆ ಕಾಂಗ್ರೆಸ್ ಹೊಸದಲ್ಲ. ನಮ್ಮ ತಾತನ ಕಾಲದಿಂದಲೂ ನಾವು ಕಾಂಗ್ರೆಸ್ನಲ್ಲೇ ಇರೋದು. 2004ರಲ್ಲಿ ಬಿಜೆಪಿ ಸೇರಿದ್ದು. ನಾನು ಬೈ ಬರ್ತ್ ಕಾಂಗ್ರೆಸ್ ಎಂದಿದ್ದಾರೆ. ಸರಳವಾಗಿ ಕಾಂಗ್ರೆಸ್ ಸೇರಿ ಎಂದಿದ್ದಾರೆ. ಆದರೆ, ಇಲ್ಲಿ ಸಭೆಯಲ್ಲಿ ಸೇರಿರೋ ಎಲ್ಲರೂ ನಾವು ಬರುತ್ತೇವೆ ಎಂದಿದ್ದಾರೆ. ಇಲ್ಲಿರುವವರು ಎಲ್ಲರೂ ಕೆಪಿಸಿಸಿ ಕಚೇರಿಗೆ ಬಂದರೆ ಎಲ್ಲರೂ ಕಾಂಗ್ರೆಸ್ ಸೇರಿದಂತೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.