ಚಿಕ್ಕಮಗಳೂರು : ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ
Team Udayavani, Jan 12, 2022, 1:56 PM IST
ಚಿಕ್ಕಮಗಳೂರು : ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನಲ್ಲಿ ಭದ್ರಾ ಬಫರ್ ಝೋನ್ ಜಾರಿ ವಿರೋಧಿಸಿ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರಗಳನ್ನು ಬರೆದಿದ್ದಾರೆ.
ಭದ್ರಾ ಬಫರ್ ಝೋನ್ ಜಾರಿಗೆ ವಿರೋಧ ಹೆಚ್ಚಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕಲಾಗಿದೆ.
ಬಫರ್ ಝೋನ್ ಜಾರಿಗೂ ಮುನ್ನ ದಯಾ ಮರಣ ಕೋರಿ ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಸೇರಿದಂತೆ 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಪತ್ರಗಳನ್ನು ಬರೆಯಲಾಗಿದೆ.
ಹಿಂದೆ ಹಲವು ಯೋಜನೆಗಳ ಮೂಲಕ ಜನರನ್ನ ಒಕ್ಕಲೆಬ್ಬಿಸಿದ್ದ ಸರ್ಕಾರ, ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಲಾಗಿತ್ತು, ಈಗ ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.