ಬಾಲಕಾರ್ಮಿಕ, ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆ : ಆಟಿಕೆ ಲಾರಿಗಾಗಿ ಭಿಕ್ಷಾಟನೆ
Team Udayavani, Feb 17, 2021, 4:20 AM IST
ಉಪ್ಪುಂದ : ಇಲ್ಲಿನ ಮಂಗಳವಾರದ ಸಂತೆಗೆ ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ದಾಳಿ ನಡೆಸಿ ಭಿಕ್ಷಾಟನೆ ನಿರತ ಹಾಗೂ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮಕ್ಕಳ ರಕ್ಷಣೆ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ರಕ್ಷಣಾ ಘಟಕ ಉಡುಪಿ, ಬೈಂದೂರು ಪೊಲೀಸ್ ಠಾಣೆ, ಉಪ್ಪುಂದ ಗ್ರಾ.ಪಂ. ಜಂಟಿ ಕಾರ್ಯಾಚರಣೆಯಲ್ಲಿ ಭಿಕ್ಷಾಟನೆ ನಿರತ ಹಾಗೂ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ 6 ಮಕ್ಕಳನ್ನು ರಕ್ಷಣೆ ಮಾಡಲಾಯಿತು.
ಉಪ್ಪುಂದ ಪೇಟೆ ಹಾಗೂ ಸಂತೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 5 ಗಂಡು ಮತ್ತು 1 ಹೆಣ್ಣು ಒಟ್ಟು 6 ಮಕ್ಕಳನ್ನು ಈ ಸಂದರ್ಭ ಬಾಲಕಾರ್ಮಿಕ ಪದ್ಧತಿ ಮತ್ತು ಭಿಕ್ಷಾಟನೆ ಬಗ್ಗೆ ಅರಿವು ಮೂಡಿಸಿ ಮಕ್ಕಳನ್ನು ರಕ್ಷಿಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಅಚಾರ್, ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ಅಂಗನವಾಡಿ ಮೇಲ್ವಿಚಾರಕಿ ಭಾಗೀರಥಿ, ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಮಹೇಶ ದೇವಾಡಿಗ, ಕಪಿಲಾ, ಸಮಾಜ ಕಾರ್ಯಕರ್ತರಾದ ಯೋಗೀಶ, ಸುರಕ್ಷಾ, ಸಂದೇಶ, ಬೈಂದೂರು ಠಾಣಾ ಸಿಬಂದಿ ಯಶೋದಾ, ಉಪ್ಪುಂದ ಗ್ರಾ.ಪಂ. ಸದಸ್ಯ ಮೋಹನಚಂದ್ರ, ಕಾರ್ಯದರ್ಶಿ ಗಿರಿಜಾ, ಸಿಬಂದಿ ನರಸಿಂಹ ಭಾಗವಹಿಸಿದ್ದರು.
ಆಟಿಕೆ ಲಾರಿಗಾಗಿ ಭಿಕ್ಷಾಟನೆ
ಪೇಟೆಯಲ್ಲಿ ಬಾಲಕನೊಬ್ಬ ತನ್ನಿಷ್ಟದ ಆಟಿಕೆಗಳನ್ನು ಖರೀದಿಸಿ ಅವುಗಳೊಂದಿಗೆ ಆಟ ಆಡುವ ಆಸೆಯಿಂದ ಭಿಕ್ಷೆ ಬೇಡಲು ತೊಡಗಿಕೊಂಡಿರುವುದು ಮನಕಲಕುವಂತಿತ್ತು. ಮಾರಿ ಅಮ್ಮನ ಮೂರ್ತಿ ಹೊತ್ತು ಭಿಕ್ಷೆ ಬೇಡುತ್ತಿದ್ದ ಹಾವೇರಿ ಮೂಲದ ಮಹಿಳೆಯೊಂದಿಗೆ 6 ವರ್ಷದ ಬಾಲಕ ತಾಯಿ ಆಟದ ಸಾಮಗ್ರಿ ತೆಗೆದು ಕೊಟ್ಟಿಲ್ಲ ಎಂದು ತಾನೆ ಬೇರೆಯಾಗಿ ಭಿಕ್ಷೆ ಬೇಡಿ ಬಣ್ಣ ಬಣ್ಣದ ಚಿಕ್ಕ ಚಿಕ್ಕ ಲಾರಿಗಳನ್ನು ತೆಗೆದುಕೊಂಡು ಖುಷಿ ಪಡುತ್ತಿರುವ ಬಗ್ಗೆ ಬಾಲಕನ ಮಾತು ಮನಕಲಕುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್