ಭೀತಿ ತಂದಿದ್ದ ಇರಾನ್‌ ವಿಮಾನ; ಭದ್ರತೆ ಕೊಟ್ಟ ಸುಖೋಯ್‌ ಯುದ್ಧ ವಿಮಾನಗಳು


Team Udayavani, Oct 3, 2022, 8:55 PM IST

ಭೀತಿ ತಂದಿದ್ದ ಇರಾನ್‌ ವಿಮಾನ; ಭದ್ರತೆ ಕೊಟ್ಟ ಸುಖೋಯ್‌ ಯುದ್ಧ ವಿಮಾನಗಳು

ನವದೆಹಲಿ: ಇರಾನ್‌ನ ರಾಜಧಾನಿ ಟೆಹ್ರಾನ್‌ನಿಂದ ಚೀನದ ಗುವಾಂಗ್‌ಝೌಗೆ ಸೋಮವಾರ ಪ್ರಯಾಣ ಬೆಳೆಸುತ್ತಿದ್ದ ವಿಮಾನವು ಕೆಲ ಗಂಟೆಗಳ ಕಾಲ ಭಾರತೀಯರಲ್ಲಿ ಭೀತಿ ಹುಟ್ಟಿಸಿತ್ತು. ವಿಮಾನವು ದೇಶದ ವಾಯುಪ್ರದೇಶದಲ್ಲಿದ್ದಾಗಲೇ ವಿಮಾನದಲ್ಲಿ ಬಾಂಬ್‌ ಇರುವುದಾಗಿ ಕರೆ ಬಂದಿದ್ದು, ವಿಮಾನವನ್ನು ಸುರಕ್ಷಿತವಾಗಿ ಭಾರತೀಯ ಗಡಿ ದಾಟಿಸಲು ವಾಯುಪಡೆ ಹರಸಾಹಸ ಮಾಡಬೇಕಾಯಿತು.

ಮಹಾನ್‌ ಏರ್‌ಫ್ಲೈಟ್‌ ಡಬ್ಲ್ಯೂ 581 ವಿಮಾನದಲ್ಲಿ ಬಾಂಬ್‌ ಇದ್ದಿದ್ದಾಗಿ ಕರೆ ಬಂದಿತ್ತು. ತಕ್ಷಣ ಎಚ್ಚೆತ್ತುಕೊಂಡ ವಾಯುಪಡೆಯು ವಿಮಾನವನ್ನು ಜೈಪುರದಲ್ಲಿ ಭೂಸ್ಪರ್ಶ ಮಾಡುವಂತೆ ವಿಮಾನದ ಪೈಲೆಟ್‌ಗೆ ತಿಳಿಸಿತು. ಆದರೆ ಅದಕ್ಕೆ ಪೈಲೆಟ್‌ಗಳು ಒಪ್ಪದಿದ್ದಾಗ ಚಂಡೀಗಢದಲ್ಲೂ ಅವಕಾಶ ಮಾಡಿಕೊಡಲಾಯಿತು. ಆದರೆ ಪೈಲೆಟ್‌ಗಳು ಅದಕ್ಕೂ ಒಪ್ಪಿಲ್ಲ. ವಿಮಾನದ ಜತೆ ನಿರಂತರ ಸಂಪರ್ಕದಲ್ಲಿದ್ದ ನವದೆಹಲಿಯ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬೆದರಿಕೆ ಕರೆಯನ್ನು ನಿರ್ಲಕ್ಷಿಸಿ ಎಂದು ಟೆಹ್ರಾನ್‌ನಿಂದ ಕರೆ ಬಂದ ನಂತರ ವಿಮಾನ ಚೀನದತ್ತ ಪ್ರಯಾಣ ಬೆಳೆಸಿದೆ.

ಚೀನದ ಗುವಾಂಗ್‌ಝೌ ವಿಮಾನ ನಿಲ್ದಾಣದಲ್ಲಿ ವಿಮಾನವು ಸುರಕ್ಷಿತವಾಗಿ ಭೂ ಸ್ಪರ್ಶ ಮಾಡಿದೆ. ನಂತರ ಪರಿಶೀಲನೆ ಮಾಡಿದಾಗ ಇದೊಂದು ಹುಸಿ ಬಾಂಬ್‌ ಬೆದರಿಕೆ ಕರೆ ಎನ್ನುವುದು ತಿಳಿದುಬಂದಿದೆ.

ಹಿಂಬಾಲಿಸಿದ ಸುಖೋಯ್‌:
ಈ ರೀತಿಯ ಕರೆ ಬಂದ ತಕ್ಷಣವೇ ವಾಯುಪಡೆ ಕಾರ್ಯಾಚರಣೆಗೆ ಇಳಿಯಿತು. ತಕ್ಷಣ ತನ್ನ ಯುದ್ಧ ವಿಮಾನವಾದ ಸುಖೋಯ್‌ ಎಸ್‌ಯು-30ಎಂಕೆಐ ಅನ್ನು ಆಗಸಕ್ಕೆ ಹಾರಿಸಿದೆ. ಬೆದರಿಕೆ ಇದ್ದ ವಿಮಾನವನ್ನು ಸುರಕ್ಷಿತ ದೂರದಿಂದಲೇ ಸುಖೋಯ್‌ ಹಿಂಬಾಲಿಸಿದೆ. ವಿಮಾನವು ಭಾರತೀಯ ವಾಯುಪ್ರದೇಶದಿಂದ ಹೊರನಡೆದ ನಂತರವೇ ಯುದ್ಧ ವಿಮಾನ ವಾಪಸು ಬಂದಿದೆ.

ಪಾಕ್‌ ದಾಟಿ ಬಂದಿದ್ದ ವಿಮಾನ:
ಇರಾನ್‌ನಿಂದ ಹೊರಟಿದ್ದ ವಿಮಾನ ಪಾಕಿಸ್ತಾನವನ್ನು ದಾಟಿ ಭಾರತದ ವಾಯುಪ್ರದೇಶ ತಲುಪಿತ್ತು. ನಂತರ ಬಾಂಗ್ಲಾದೇಶ, ಮಾಯನ್ಮಾರ್‌ ಮಾರ್ಗವಾಗಿ ಚೀನ ತಲುಪಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.