ಚೀನಾ Apps ನಿಷೇಧ ಎಫೆಕ್ಟ್:ಗಾಲ್ವಾನ್ ಕಣಿವೆ ಪ್ರದೇಶದಿಂದ ಹಿಂದೆ ಸರಿದ ಚೀನಾ ಸೇನೆ?
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದಿಢೀರ್ ಎಂದು ಅಚ್ಚರಿಯ ಭೇಟಿ ನೀಡಿದ್ದರು
Team Udayavani, Jul 6, 2020, 3:47 PM IST
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದ ಗಾಲ್ವಾನ್ ಕಣಿವೆ ಪ್ರದೇಶದ ಬಿಕ್ಕಟ್ಟಿನ ವಿಚಾರದಲ್ಲಿ ಇದೀಗ ಆಶಾದಾಯಕ ಬೆಳವಣಿಗೆ ನಡೆದಿದೆ. ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಬೀಡು ಬಿಟ್ಟಿದ್ದ ಚೀನಾ ಸೈನಿಕರು ಸುಮಾರು ಒಂದು ಕಿಲೋ ಮೀಟರ್ ನಷ್ಟು ದೂರ ಸರಿದಿರುವುದಾಗಿ ಮೂಲಗಳು ತಿಳಿಸಿವೆ.
ಜೂನ್ 15ರಂದು ಪೂರ್ವ ಲಡಾಖ್ ನ ಗಾಲ್ವಾನ್ ನದಿ ಕಣಿವೆ ಪ್ರದೇಶದಲ್ಲಿ ಭಾರತೀಯ ಸೈನಿಕರ ಮೇಲೆ ಏಕಾಏಕಿ ಕಲ್ಲು, ಕಬ್ಬಿಣದ ರಾಡ್ ಗಳಿಂದ ಹಲ್ಲೆ ನಡೆಸಿದ ಪರಿಣಾಮ ಇಪ್ಪತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆ ನಂತರ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಯುದ್ಧದ ಹಂತದವರೆಗೆ ತಲುಪಿತ್ತು ಎಂದು ಮೂಲಗಳು ಹೇಳಿವೆ.
ಗಾಲ್ವಾನ್ ನದಿ ಕಣಿವೆ ಪ್ರದೇಶವನ್ನು ಚೀನಾ ಸೈನಿಕರು ಅಕ್ರಮವಾಗಿ ವಶಪಡಿಸಿಕೊಂಡು ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್ ಗಳನ್ನು ತೆಗೆದು ಹಾಕಿರುವುದಾಗಿ ವರದಿ ವಿವರಿಸಿದೆ. ನಿಜಕ್ಕೂ ಚೀನಾ ಸೇನೆ ಹಿಂದೆ ಸರಿದಿದೆಯೇ ಎಂಬ ಬಗ್ಗೆ ನಾವು ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕಾಗಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮ ವರದಿ ವಿವರಿಸಿದೆ.
ಲಡಾಖ್ ನ ಫಾರ್ವರ್ಡ್ ಪೋಸ್ಟ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದಿಢೀರ್ ಎಂದು ಅಚ್ಚರಿಯ ಭೇಟಿ ನೀಡಿದ ಮೂರು ದಿನಗಳ ನಂತರ ಕಳೆದ 24ಗಂಟೆಯಲ್ಲಿ ಆಕ್ರಮಿತ ಪ್ರದೇಶದಿಂದ ಚೀನಾ ಸೇನೆ ಹಿಂದೆ ಸರಿದಿರುವುದಾಗಿ ವರದಿ ತಿಳಿಸಿದೆ.
ಭಾರತ ಮತ್ತು ಚೀನಾ ನಡುವಿನ ಸಂಘರ್ಷ, ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ಉಭಯ ದೇಶಗಳ ನಡುವೆ ಹಲವು ಸುತ್ತಿನ ರಾಜತಾಂತ್ರಿಕ ಹಾಗೂ ಸೇನಾ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿತ್ತು. ಆದರೂ ಚೀನಾ ಸೇನೆಯನ್ನು ಹಿಂದೆ ತೆಗೆಯಲು ನಿರಾಕರಿಸಿತ್ತು. ಚೀನಾಗೆ ಸಡ್ಡು ಹೊಡೆಯುವ ನಿಟ್ಟಿನಲ್ಲಿ ಗಾಲ್ವಾನ್ ಸಂಘರ್ಷದ ನಂತರ ಚೀನಾ ಮೂಲದ ಸುಮಾರು 58 ಆ್ಯಪ್ಸ್ ಗಳನ್ನು ನಿಷೇಧಿಸಿತ್ತು. ಅಷ್ಟೇ ಅಲ್ಲ ಮೂಲಭೂತ ಸೌಕರ್ಯಗಳ ಕೆಲಸದಲ್ಲಿ ಚೀನಾ ಕಂಪನಿಗಳ ಜತೆಗಿನ ಒಪ್ಪಂದವನ್ನು ಭಾರತ ಸರ್ಕಾರ ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಯು ಸೇನೆಯ ಹೊಸ ಶಕ್ತಿ ‘ರಫೇಲ್’ ಗೆ ಆಗಸದಲ್ಲೇ ಇಂಧನ ಭರ್ತಿ!
ಭಾರತದ ರಫೇಲ್ v/s ಚೀನದ J-11: ಯಾರದ್ದು ಸ್ಟ್ರಾಂಗ್ – ಇಲ್ಲಿದೆ ಡಿಟೇಲ್ಸ್
ಮತ್ತೆ ಚೀನದ 47 ಆ್ಯಪ್ ನಿಷೇಧಿಸಿದ ಭಾರತ; ಒಟ್ಟು 250 ಆ್ಯಪ್ ನಿಷೇಧವಾಗಲಿದೆಯಾ?
ಗಡಿ ವಿವಾದ: ಯಥಾಸ್ಥಿತಿಯಲ್ಲಿನ ಯಾವುದೇ ಬದಲಾವಣೆ ನಾವು ಒಪ್ಪಲ್ಲ: ಚೀನಾಕ್ಕೆ ಭಾರತ
ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ 2 ದಿನಗಳ ಲಡಾಕ್-ಕಾಶ್ಮೀರ ಪ್ರವಾಸ ಆರಂಭ, ಮಹತ್ವದ ಮಾತುಕತೆ !
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ