ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ


Team Udayavani, Jan 23, 2022, 6:19 PM IST

1-sssad

ಇಟಾನಗರ : ಅರುಣಾಚಲ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಅಪಹರಣಕ್ಕೊಳಗಾಗಿದ್ದಾನೆ ಎನ್ನಲಾದ 17 ವರ್ಷದ ಬಾಲಕನನ್ನು ಚೀನಾ ಲಿಬರೇಷನ್ ಆರ್ಮಿಯ ಸೈನಿಕರು ಪತ್ತೆ ಮಾಡಿರುವುದಾಗಿ ತಿಳಿಸಿದ್ದು, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಸೂಕ್ತ ವಿಧಾನವನ್ನು ಅನುಸರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪಿಎಲ್‌ಎ ಬಾಲಕನ ಗುರುತನ್ನು ದೃಢೀಕರಿಸಿಲ್ಲ ಮತ್ತು ಚೀನಾದ ಪಡೆಗಳಿಂದ ಕರೆದೊಯ್ದಿರುವ ವ್ಯಕ್ತಿ ಮಿರಾಮ್ ಟ್ಯಾರೋನ್ ಎಂದು ನಂಬಲಾಗಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ.

ಬಾಲಕನ ಅಪಹರಣವಾಗಿದೆ ಎಂಬ ವಿಚಾರ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.ಘಟನೆ ಬೆಳಕಿಗೆ ಬಂದ ನಂತರ ಭಾರತೀಯ ಸೇನೆಯು ಬಾಲಕನನ್ನು ಪತ್ತೆಹಚ್ಚಲು ಪಿಎಲ್‌ಎಯಿಂದ ನೆರವು ಕೋರಿತ್ತು.

ಹುಡುಗ ಪಿಎಲ್‌ಎ ವಶದಲ್ಲಿದ್ದಾನೆ ಮತ್ತು ಶೀಘ್ರದಲ್ಲೇ ಹಸ್ತಾಂತರಿಸಲಾಗುವುದು ಎಂದು ಭಾರತೀಯ ಸೇನೆಯಿಂದ ದೃಢೀಕರಣವನ್ನು ಪಡೆದುಕೊಂಡಿದ್ದೇನೆ ಎಂದು ಅರುಣಾಚಲ ಪ್ರದೇಶದ ಸಂಸತ್ ಸದಸ್ಯ ತಾಪಿರ್ ಗಾವೊ ಅವರು ಪಿಟಿಐಗೆ ತಿಳಿಸಿದ್ದಾರೆ.

ಪಿಎಲ್‌ಎ ಭಾನುವಾರ ಭಾರತೀಯ ಸೇನೆಗೆ ತಮ್ಮ ಪ್ರದೇಶದಲ್ಲಿ “ಹುಡುಗ ಪತ್ತೆಯಾಗಿದ್ದಾನೆ ” ಮತ್ತು ಶೀಘ್ರದಲ್ಲೇ ಅವನನ್ನು ಹಸ್ತಾಂತರಿಸುವುದಾಗಿ ತಿಳಿಸಿದೆ.

ಜನವರಿ 19 ರಂದು, ಅಪ್ಪರ್ ಸಿಯಾಂಗ್ ಜಿಲ್ಲೆಯ ಸಿಯುಂಗ್ಲಾ ಪ್ರದೇಶದ (ಬಿಶಿಂಗ್ ಗ್ರಾಮ) ಲುಂಗ್ಟಾ ಜೋರ್ ಪ್ರದೇಶದಿಂದ ಟ್ಯಾರೊನ್ ಅವರನ್ನು ಪಿಎಲ್‌ಎ ಅಪಹರಿಸಿದೆ ಎಂದು ಗಾವೊ ಹೇಳಿಕೊಂಡಿದ್ದರು.

ಟ್ಯಾರನ್‌ನ ಸ್ನೇಹಿತ ಜಾನಿ ಯಾಯಿಂಗ್ ಪಿಎಲ್‌ಎಯಿಂದ ಅಪಹರಣದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಇಬ್ಬರೂ ಜಿಡೋ ಗ್ರಾಮಕ್ಕೆ ಸೇರಿದ ಸ್ಥಳೀಯ ಬೇಟೆಗಾರರು. ಅರುಣಾಚಲ ಪ್ರದೇಶದ ತ್ಸಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದ ಬಳಿ ಈ ಘಟನೆ ನಡೆದಿದೆ.

ಜನವರಿ 20 ರಂದು, ಚೀನಾದ ವಿದೇಶಾಂಗ ಸಚಿವಾಲಯವು ಘಟನೆಯ ಬಗ್ಗೆ ತಿಳಿದಿಲ್ಲ ಎಂದು ಹೇಳಿತ್ತು, ಆದರೆ ಸೇನೆ ಗಡಿಗಳನ್ನು ನಿಯಂತ್ರಿಸುತ್ತದೆ ಮತ್ತು “ಅಕ್ರಮ ಪ್ರವೇಶ ಮತ್ತು ನಿರ್ಗಮನ ಚಟುವಟಿಕೆಗಳನ್ನು” ಭೇದಿಸುತ್ತದೆ ಎಂದು ಹೇಳಿತ್ತು. ಸೆಪ್ಟೆಂಬರ್ 2020 ರಲ್ಲಿ, ಪಿ ಎಲ್ ಎ ಅರುಣಾಚಲ ಪ್ರದೇಶದ ಅಪ್ಪರ್ ಸುಬಾನ್ಸಿರಿ ಜಿಲ್ಲೆಯಿಂದ ಐದು ಯುವಕರನ್ನು ಅಪಹರಿಸಿತ್ತು. ಸುಮಾರು ಒಂದು ವಾರದ ನಂತರ ಯುವಕರನ್ನು ಬಿಡುಗಡೆ ಮಾಡಿತ್ತು.

ಏಪ್ರಿಲ್ 2020 ರಿಂದ ಲಡಾಖ್‌ನಲ್ಲಿ ಭಾರತೀಯ ಸೇನೆಯು ಪಿಎಲ್‌ಎಯೊಂದಿಗೆ ಸಂಘರ್ಷಮಯ ಸ್ಥಿತಿಯಲ್ಲಿರುವ ವೇಳೆಯಲ್ಲೇ ಇತ್ತೀಚಿನ ಅಪಹರಣ ಘಟನೆ ನಡೆದಿದೆ.

ಭಾರತವು ಚೀನಾದೊಂದಿಗೆ ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ 3,400 ಕಿಮೀ ಉದ್ದದ ನೈಜ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಹಂಚಿಕೊಂಡಿದೆ. ತ್ಸಾಂಗ್ಪೋ ನದಿಯನ್ನು ಅರುಣಾಚಲ ಪ್ರದೇಶದಲ್ಲಿ ಸಿಯಾಂಗ್ ಮತ್ತು ಅಸ್ಸಾಂನಲ್ಲಿ ಬ್ರಹ್ಮಪುತ್ರ ಎಂದು ಕರೆಯಲಾಗುತ್ತದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.