ಬೌದ್ಧ ಬಿಕ್ಕು ವೇಷದಲ್ಲಿ ದೆಹಲಿಯಲ್ಲಿ ವಾಸ್ತವ್ಯ…ಬೇಹುಗಾರಿಕೆ ನಡೆಸ್ತಿದ್ದ ಚೀನಾ ಯುವತಿ ಬಂಧನ
ನೇಪಾಳ ರಾಜಧಾನಿ ಕಾಠ್ಮಂಡು ವಿಳಾಸ ಹೊಂದಿದ್ದು, ಡೋಲ್ಮಾ ಲಾಮಾ ಎಂಬ ಹೆಸರನ್ನು ಹೊಂದಿದ್ದಾಳೆ
Team Udayavani, Oct 21, 2022, 10:14 AM IST
ನವದೆಹಲಿ:ಉತ್ತರ ದೆಹಲಿಯ ಟಿಬೆಟಿಯನ್ ನಿರಾಶ್ರಿತರ ಶಿಬಿರದಲ್ಲಿ ಬೌದ್ಧ ಬಿಕ್ಕು ವೇಷದಲ್ಲಿ ವಾಸವಾಗಿದ್ದು, ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ (ಅಕ್ಟೋಬರ್ 21) ತಿಳಿಸಿದ್ದಾರೆ.
ಇದನ್ನೂ ಓದಿ:ಗೀತೆಯಲ್ಲಿ ಶ್ರೀಕೃಷ್ಣ ಅರ್ಜುನನಿಗೆ ‘ಜಿಹಾದ್’ ಪಾಠ ಮಾಡಿದ್ದಾನೆ: ಕೈ ನಾಯಕ ಶಿವರಾಜ್ ಪಾಟೀಲ್
ಆಕೆಯ ಬಳಿ ಇದ್ದ ಗುರುತು ಪತ್ರದಲ್ಲಿ ನೇಪಾಳ ರಾಜಧಾನಿ ಕಾಠ್ಮಂಡು ವಿಳಾಸ ಹೊಂದಿದ್ದು, ಡೋಲ್ಮಾ ಲಾಮಾ ಎಂಬ ಹೆಸರನ್ನು ಹೊಂದಿದ್ದಾಳೆ. ಆದರೆ ಆಕೆಯ ನಿಜವಾದ ಹೆಸರು ಕೈ ರೂವೊ ಎಂದು ದಾಖಲಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ದೆಹಲಿ ವಿಶ್ವವಿದ್ಯಾನಿಯಲದ ಉತ್ತರ ಕ್ಯಾಂಪಸ್ ಬಳಿ ಇರುವ ಪ್ರವಾಸಿಗರ ಜನಪ್ರಿಯ ಟಿಬೆಟಿಯನ್ ನಿರಾಶ್ರಿತ ಶಿಬಿರದ ಮಜ್ನು ಕಾ ತಿಲ್ಲಾ ಕಾಲೋನಿಯಲ್ಲಿ ವಾಸವಾಗಿದ್ದಳು. ಈ ಕಾಲೋನಿಯಲ್ಲಿ ಈಕೆ ಸಾಂಪ್ರದಾಯಿಕ ಕಡು ಕೆಂಪು ಬಣ್ಣದ ವಸ್ತ್ರ ಧರಿಸಿ ಬೌದ್ಧ ಬಿಕ್ಕು ವೇಷದಲ್ಲಿ ವಾಸವಾಗಿರುವುದಾಗಿ ವರದಿ ವಿವರಿಸಿದೆ.
ಶಂಕಿತ ಡೋಲ್ಮಾ ಬಗ್ಗೆ ಪೊಲೀಸ್ ಅಧಿಕಾರಿಗಳು ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ ಅವರ ದಾಖಲೆಗಳನ್ನು ಪರಿಶೀಲಿಸಿದಾಗ, ಕೈ ರೂವೋ 2019ರಲ್ಲಿ ಚೀನಾದ ಪಾಸ್ ಪೋರ್ಟ್ ಬಳಸಿ ಭಾರತಕ್ಕೆ ಬಂದಿರುವುದಾಗಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಡೋಲ್ಮಾಳನ್ನು ವಶಕ್ಕೆ ಪಡೆದು ಪ್ರಶ್ನಿಸಿದ್ದ ಸಂದರ್ಭದಲ್ಲಿ ತನ್ನನ್ನು ಚೀನಾದ ಕಮ್ಯೂನಿಷ್ಟ್ ಪಕ್ಷದ ಕೆಲವು ಮುಖಂಡರು ಕೊಲ್ಲಲು ಬಯಸಿದ್ದರು ಎಂದು ತಿಳಿಸಿದ್ದಳು. ಈಕೆಗೆ ಇಂಗ್ಲೀಷ್, ಮ್ಯಾಂಡ್ರಿಯನ್ ಮತ್ತು ನೇಪಾಳಿ ಸೇರಿ ಮೂರು ಭಾಷೆಗಳು ತಿಳಿದಿರುವುದಾಗಿ ವರದಿ ಹೇಳಿದೆ.
ಆಕೆಯ ಹೇಳಿಕೆ ಮತ್ತು ನಡವಳಿಕೆ ಬಗ್ಗೆ ಸಂಶಯ ಹೊಂದಿದ್ದು, ಬಂಧನಕ್ಕೊಳಗಾಗಿರುವ ಡೋಲ್ಮಾ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ