3 ತಿಂಗಳೊಳಗೆ ರಾಜಧಾನಿಯ 48,000 ಕೊಳಗೇರಿಯನ್ನು ತೆರವುಗೊಳಿಸಿ; ಸುಪ್ರೀಂ ಆದೇಶ
ಕೋರ್ಟ್ ಆದೇಶ ಹೊರತುಪಡಿಸಿ ಯಾವುದೇ ರಾಜಕೀಯ ಒತ್ತಡ, ಮಧ್ಯಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.
Team Udayavani, Sep 3, 2020, 5:48 PM IST
ನವದೆಹಲಿ: ದೆಹಲಿಯ ರೈಲ್ವೆ ಹಳಿ ಹಾಗೂ ಸುರಕ್ಷತಾ ಪ್ರದೇಶವನ್ನು ಹೊಂದಿಕೊಂಡಂತೆ ಇರುವ ಸುಮಾರು 48,000 ಕೊಳಗೇರಿ ಪ್ರದೇಶವನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶ ನೀಡಿದೆ. ಮೂರು ತಿಂಗಳೊಳಗೆ ಹಂತ, ಹಂತವಾಗಿ ಕೊಳಗೇರಿಯನ್ನು ತೆರವುಗೊಳಿಸಬೇಕು ಎಂದು ಕೋರ್ಟ್ ಸೂಚಿಸಿದೆ.
ಅಲ್ಲದೇ ಕೋರ್ಟ್ ಆದೇಶ ಹೊರತುಪಡಿಸಿ ಯಾವುದೇ ರಾಜಕೀಯ ಒತ್ತಡ, ಮಧ್ಯಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕೊಳಗೇರಿ ತೆರವುಗೊಳಿಸುವ ವಿಚಾರದಲ್ಲಿ ಕೆಳ ನ್ಯಾಯಾಲಯಗಳು ನೀಡುವ ತಡೆಯಾಜ್ಞೆ ಈ ಆದೇಶಕ್ಕೆ ಅನ್ವಯವಾಗುವುದಿಲ್ಲ ಎಂಬುದನ್ನು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಸುರಕ್ಷತಾ ವಲಯದೊಳಗೆ ಕಟ್ಟಿಕೊಂಡಿರುವ ಕೊಳಗೇರಿಯನ್ನು ಮೂರು ತಿಂಗಳೊಳಗೆ ತೆರವುಗೊಳಿಸಲೇಬೇಕು..ಈ ಬಗ್ಗೆ ಯಾವುದೇ ರಾಜಕೀಯ ಪ್ರವೇಶವಾಗಲಿ, ಯಾವುದೇ ಕೋರ್ಟ್ ತಡೆಯಾಜ್ಞೆಯಾಗಲಿ ನೀಡುವಂತಿಲ್ಲ ಎಂದು ಜಸ್ಟೀಸ್ ಅರುಣ್ ಮಿಶ್ರಾ ನೇತೃತ್ವದ ಪೀಠ ತಿಳಿಸಿದೆ.
70 ಕಿಲೋ ಮೀಟರ್ ರೈಲ್ವೆ ಹಳಿಯ ಉದ್ದಕ್ಕೂ ಹೊಂದಿಕೊಂಡಂತೆ ಇರುವ ಕೊಳಗೇರಿಯನ್ನು ತೆರವುಗೊಳಿಸಲು ಸ್ಪೆಷಲ್ ಟಾಸ್ಕ್ ಪೋರ್ಸ್ ಅನ್ನು ರಚಿಸುವಂತೆ ರೈಲ್ವೆ ಇಲಾಖೆ ಸಲ್ಲಿಸಿದ್ದ ಅಫಿಡವಿತ್ ಅನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು.
ಅತಿಕ್ರಮಣ ತೆರವುಗೊಳಿಸುವಂತೆ ರಾಷ್ಟ್ರೀಯ ಹಸಿರು ಪೀಠದ ಆದೇಶದಂತೆ 2018ರಲ್ಲಿ ಸ್ಪೆಷಲ್ ಟಾಸ್ಕ್ ಪೋರ್ಸ್ ಅನ್ನು ರಚಿಸಲಾಗಿತ್ತು. 140 ಕಿಲೋ ಮೀಟರ್ ಉದ್ದದ ರೈಲ್ವೆ ಹಳಿ ಉದ್ದಕ್ಕೂ ಕಸದ ರಾಶಿ ಮತ್ತು ಪ್ಲ್ಯಾಸ್ಟಿಕ್ ಚೀಲ ತುಂಬಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್