ವಾಯುಭಾರ ಕುಸಿತ: ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ !
Team Udayavani, Nov 22, 2020, 11:03 PM IST
ನವದೆಹಲಿ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಸೈಕ್ಲೋನ್ ಸೃಷ್ಟಿಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತದ ಕೆಲವೆಡೆ ಭಾರೀ ಮಳೆಯಾಗುವ ಸಂಭವವಿದೆ.
“ತಮಿಳುನಾಡು, ಪುದುಚೆರಿ, ಕಾರೈಕಲ್ನಲ್ಲಿ ನ.24ರಿಂದ 25ರ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮೆ, ತೆಲಂಗಾಣದ ಕೆಲವು ಪ್ರದೇಶಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ನ.25ರ ವರೆಗೆ ಈ ಪ್ರದೇಶದ ಮೀನುಗಾರರಿಗೆ ಅರಬ್ಬೀ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಪ್ರಸ್ತುತ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಸೈಕ್ಲೋನ್ ಗರಿಷ್ಠ 80-90 ಕಿ.ಮೀ. ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಧಾರಾಕಾರ ಮಳೆಯೊಂದಿಗೆ ರಭಸ ಗಾಳಿ ಬೀಸಬಹುದಾದ್ದರಿಂದ ಭೂಕುಸಿತ ಉಂಟಾಗಬಹುದು ಎಂದು ಐಎಂಡಿ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?