ಪರಿಸರ ಸಹ್ಯ ಯೋಜನೆಗಳಿಂದಷ್ಟೇ ತಾಪಮಾನಕ್ಕೆ ಕಡಿವಾಣ ಸಾಧ್ಯ


Team Udayavani, Apr 21, 2023, 6:39 AM IST

recycle

ಭಾರತ ಸಹಿತ ಏಷ್ಯಾ ಖಂಡದಲ್ಲಿ ಪ್ರಸಕ್ತ ವರ್ಷ ತಾಪಮಾನ ಒಂದೇ ಸಮನೆ ಹೆಚ್ಚುತ್ತಿದ್ದು ಆತಂಕಕಾರಿ ಸ್ಥಿತಿಯನ್ನು ತಲುಪಿದೆ. ಭಾರತವಂತೂ ಕಂಡರಿಯದಂಥ ಸುಡುಬಿಸಿಲಿನಿಂದ ಕಂಗೆಟ್ಟಿದೆ. ತಾಪಮಾನ ಹೆಚ್ಚಳದ ಜತೆಜತೆಯಲ್ಲಿ ಉಷ್ಣಹವೆ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದ್ದು ದೇಶದ ಸರಿಸುಮಾರು ಶೇ. 90ರಷ್ಟು ಪ್ರದೇಶ ಉಷ್ಣಹವೆಯ ಅಪಾಯದಲ್ಲಿದ್ದು ಇದನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.
ಈಗ ದೇಶದ ಬಹುತೇಕ ಭಾಗಗಳು ಬಿಸಿಲಿನ ಝಳದಿಂದ ತತ್ತರಿಸುತ್ತಿದ್ದು ಹಲವೆಡೆ ಬಿಸಿಲಿನ ತೀವ್ರತೆಯ ಕಾರಣದಿಂದ ಜನರು ಸಾವನ್ನಪ್ಪುತ್ತಿರುವ ಬಗೆಗೆ ವರದಿಯಾಗುತ್ತಿದೆ. ಇದೇ ವೇಳೆ ರಬಿ ಋತುವಿನ ಬೆಳೆಗಳ ಮೇಲೆ ಈ ವಿಪರೀತ ಬಿಸಿಲು ಮತ್ತು ಧಗೆ ವ್ಯತಿರಿಕ್ತ ಪರಿಣಾಮ ಬೀರಿದ್ದು ಇಳುವರಿ ಕುಂಠಿತವಾಗಿದೆ. ಅಕಾಲಿಕ ಮಳೆ ಮತ್ತು ತಾಪಮಾನ ಹೆಚ್ಚಳ ರೈತಾಪಿ ವರ್ಗ ಮತ್ತು ಜನಸಾಮಾನ್ಯರ ಮೇಲೆ ತೀವ್ರತೆರನಾದ ಪರಿಣಾಮವನ್ನು ಬೀರತೊಡಗಿದೆ.

ದಿನಗೂಲಿ ಕಾರ್ಮಿಕರ ಮೇಲಂತೂ ಬಿಸಿಲಿನ ಝಳ ನೇರ ಪರಿಣಾಮವನ್ನು ಬೀರಿದೆ. ಇದೇ ವೇಳೆ ನಿರ್ಮಾಣ ಕಾಮಗಾರಿಗಳಿಗೂ ಇದು ಹೊಡೆತ ನೀಡಿದ್ದು ನಿರೀಕ್ಷಿತ ವೇಗದಲ್ಲಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಒಟ್ಟಾರೆಯಾಗಿ ಮಾನವ ಶ್ರಮದ ಮೇಲೆ ಈ ಪ್ರತಿಕೂಲ ಹವಾಮಾನ ಪರಿಣಾಮವನ್ನು ಬೀರಿದ್ದು ದೇಶದ ಆರ್ಥಿಕತೆಗೂ ಪೆಟ್ಟು ನೀಡುವ ಸಾಧ್ಯತೆ ಇದೆ.

ಕಳೆದ ಮೂರು ದಶಕಗಳ ಅವಧಿಯಲ್ಲಿ ಉಷ್ಣಹವೆಯ ಕಾರಣದಿಂದಾಗಿ ದೇಶದಲ್ಲಿ 24,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು ಸರಕಾರ ಇನ್ನಾದರೂ ತಾಪಮಾನ ಹೆಚ್ಚಳವನ್ನು ಗಂಭೀರ ಸಮಸ್ಯೆಯಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ. ಅಷ್ಟು ಮಾತ್ರವಲ್ಲದೆ ಸದ್ಯದ ಮಾನದಂಡಗಳು ಉಷ್ಣಹವೆಯ ಪರಿಣಾಮವನ್ನು ನಿಖರವಾಗಿ ಅಂದಾಜಿಸುವಷ್ಟು ಸಶಕ್ತವಾಗಿಲ್ಲ ಎಂದು ವರದಿಯಲ್ಲಿ ಬೆಟ್ಟು ಮಾಡಲಾಗಿದ್ದು ದೀರ್ಘಾವಧಿಯಲ್ಲಿ ಇದರ ಪರಿಣಾಮಗಳು ಇನ್ನಷ್ಟು ಆತಂಕಕಾರಿಯಾಗಿರಬಹುದು ಎಂದು ಸೂಚ್ಯವಾಗಿ ತಿಳಿಸಿದೆ.

ಇಂತಹುದೇ ಪರಿಸ್ಥಿತಿಯನ್ನು ಏಷ್ಯಾದ ಬಹುತೇಕ ದೇಶಗಳು ಎದುರಿಸುತ್ತಿದ್ದು ಮುಂದಿನ ದಿನಗಳಲ್ಲಿ ಇದರ ತೀವ್ರತೆ ಮತ್ತಷ್ಟು ಹೆಚ್ಚಲಿದೆ. ಸದ್ಯ ಹೆಚ್ಚುತ್ತಿರುವ ತಾಪಮಾನ ಮತ್ತು ಉಷ್ಣಹವೆಯ ಪರಿಣಾಮ ತಾತ್ಕಾಲಿಕ ಎಂದೆನಿಸಿದರೂ ಭವಿಷ್ಯದ ದಶಕಗಳಲ್ಲಿ ಇದು ಗಂಭೀರ ಸಮಸ್ಯೆಯಾಗಿ ನಮ್ಮನ್ನು ಕಾಡಲಿದೆ. ಜನರ ದುಡಿಮೆಯ ಶಕ್ತಿಯನ್ನು ಇದು ಕುಗ್ಗಿಸಲಿದ್ದು ತತ್ಪರಿಣಾಮವಾಗಿ ಕುಟುಂಬಗಳ ಆದಾಯದ ಮೇಲೆ ಹೊಡೆತ ಬೀಳಲಿದೆ. ಇದರಿಂದ ಸಹಜವಾಗಿಯೇ ಜನರ ಜೀವನಮಟ್ಟವನ್ನು ಮತ್ತಷ್ಟು ಕುಸಿಯುವಂತೆ ಮಾಡಲಿದೆ ಮತ್ತು ಆರ್ಥಿಕತೆಯ ಮೇಲೂ ನೇರ ಪರಿಣಾಮ ಬೀರಲಿದೆ.

ಜಾಗತಿಕ ತಾಪಮಾನ ಹೆಚ್ಚಳ, ಹವಾಮಾನ ಬದಲಾವಣೆ ಕುರಿತಂತೆ ಜಾಗತಿಕವಾಗಿ ಕಳೆದೊಂದು ದಶಕದಿಂದ ಚರ್ಚೆಗಳು ನಡೆಯುತ್ತ ಬಂದಿವೆಯಾದರೂ ಭಾರತಕ್ಕೆ ಇದೇ ಮೊದಲ ಬಾರಿಗೆ ತಾಪಮಾನ ಹೆಚ್ಚಳದ ಬಿಸಿ ತೀವ್ರತೆರನಾಗಿ ತಟ್ಟಿದೆ. ಈ ಸಮಸ್ಯೆಯಿಂದ ಪಾರಾಗಲು ದೂರದೃಷ್ಟಿಯಿಂದ ಕೂಡಿದ ಯೋಚನೆ, ಯೋಜನೆಗಳನ್ನು ಜಾರಿಗೆ ತರಬೇಕಿದೆ. ಪರಿಸರದೊಂದಿಗೆ ಸಹಬಾಳ್ವೆ ನಡೆಸುವ ದೇಶದ ಸಾಂಪ್ರದಾಯಿಕ ಶೈಲಿಗೆ ಮರಳಲು ಕಾಲ ಪಕ್ವವಾಗಿದೆ. ಆಧುನಿಕ ಸೌಲಭ್ಯ, ಅಭಿವೃದ್ಧಿಯ ಹೆಸರಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಯೋಜನೆಗಳು ದೇಶದ ಹವಾಮಾನ ಪರಿಸ್ಥಿತಿಗೆ ಪೂರಕವೋ ಎಂದು ಅಧ್ಯಯನ ನಡೆಸಿದ ಬಳಿಕ ಪರಿಸರಸಹ್ಯವಾಗಿದ್ದಲ್ಲಿ ಮಾತ್ರವೇ ಇಂಥ ಯೋಜನೆಗಳನ್ನು ಅನುಷ್ಠಾನಗೊಳಿಸುವುದೊಳಿತು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.