ದೆಹಲಿಯಲ್ಲಿ ಶಾಲೆಗಳು ಬಂದ್, ಸರಕಾರಿ ಕಚೇರಿಗಳು ಮನೆಯಿಂದಲೇ ಕೆಲಸ
Team Udayavani, Nov 13, 2021, 7:51 PM IST
ಹೊಸದಿಲ್ಲಿ : “ಸೋಮವಾರದಿಂದ ಒಂದು ವಾರದವರೆಗೆ ಶಾಲೆಗಳನ್ನು ಭೌತಿಕವಾಗಿ ಮುಚ್ಚಲಾಗುವುದು; ಮಕ್ಕಳು ಕಲುಷಿತ ಗಾಳಿಯನ್ನು ಉಸಿರಾಡುವ ಅಗತ್ಯವಿಲ್ಲ’ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ವಾಯು ಗುಣಮಟ್ಟದ ಪರಿಸ್ಥಿತಿಯ ಕುರಿತು ತುರ್ತು ಸಭೆಗೆ ನಂತರ ದೆಹಲಿ ಸಿಎಂ ಕೆಲವು ಮಹತ್ವದ ಘೋಷಣೆಗಳನ್ನು ಮಾಡಿದ್ದು,ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲಿವೆ ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಸಾಧ್ಯವಾದಷ್ಟು ವರ್ಕ್ ಫ್ರಮ್ ಹೋಮ್ ಆಯ್ಕೆಗೆ ಹೋಗಲು ಖಾಸಗಿ ಕಚೇರಿಗಳಿಗೆ ಸಲಹೆಯನ್ನು ನೀಡಲಾಗುತ್ತಿದೆ ಎಂದರು.
ನವೆಂಬರ್ 14 ರಿಂದ 17 ರ ನಡುವೆ ನಿರ್ಮಾಣ ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಸಿಎಂ ತಿಳಿಸಿದರು.
ಇದನ್ನೂ ಓದಿ :ಎರಡು ದಿನಗಳ ಕಾಲ ದೆಹಲಿ ಲಾಕ್ ಡೌನ್ ಮಾಡಿ; ಸುಪ್ರೀಂ ಸಿಜೆಐ ಈ ಸಲಹೆ ಕೊಟ್ಟಿದ್ದೇಕೆ?
ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿನ ವಾಯುಮಾಲಿನ್ಯ ಪರಿಸ್ಥಿತಿಯನ್ನು ‘ತುರ್ತು ಪರಿಸ್ಥಿತಿ’ ಎಂದು ಸುಪ್ರೀಂ ಕೋರ್ಟ್ ಘೋಷಿಸಿ, ರಾಜಧಾನಿಯಲ್ಲಿ ಲಾಕ್ಡೌನ್ ಅನ್ನು ಹೇರಲು ಸೂಚಿಸಿದ ನಂತರ ದೆಹಲಿ ಸರ್ಕಾರಗಳ ಈ ಕ್ರಿಯಾ ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ