ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ
Team Udayavani, Jun 21, 2022, 7:23 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.
ಆಕೆಯ ಸಮಸ್ಯೆಯ ಕುರಿತು ವಿಚಾರಿಸಿದಾಗ, ಶಂಕ್ರಮ್ಮನ ಮಗು ಕೃಷ್ಣವೇಣಿ, ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುವುದು. ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಳು.
ಶಂಕ್ರಮ್ಮನ ಮನವಿಗೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಮಗು ಕೃಷ್ಣವೇಣಿಯ ಚಿಕಿತ್ಸೆಗೆ ನೆರವು ನೀಡುವ ಭರವಸೆ ನೀಡಿದರು. ಇದಾಗಿ ಎರಡು ತಾಸಿನೊಳಗೆ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಪತ್ರ ಬರೆದು, ಕೃಷ್ಣವೇಣಿಯ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.
ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆಬಿಲ್ ಗಳನ್ನು ಸಲ್ಲಿಸುವಂತೆ ಪತ್ರದಲ್ಲಿ ಎಸ್ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ.
ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ ಮುಖ್ಯಮಂತ್ರಿಗಳ ಮಾತು ಕೆಲವೇ ಗಂಟೆಗಳಲ್ಲಿ ಅಧಿಕೃತ ಭರವಸೆಯಾಗಿದೆ. ಮುಖ್ಯಮಂತ್ರಿಗಳ ಈ ಸ್ಪಂದನೆಗೆ ಮಗುವಿನ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ