ಅಮಿತ್ ಶಾ ಜತೆ ಸಿಎಂ ಬೊಮ್ಮಾಯಿ, ನಳಿನ್, ಕಾರಜೋಳ ಸಭೆ
Team Udayavani, Dec 27, 2022, 12:40 AM IST
ಬೆಂಗಳೂರು: ವಿಧಾನ ಸಭೆ ಚುನಾವಣೆ ಎದುರಿಸಲು ಕೈಗೊಂ ಡಿರುವ ಸಿದ್ಧತೆ ಹಾಗೂ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಮುಖ್ಯ ಮಂತ್ರಿ ಬೊಮ್ಮಾಯಿ ಸೋಮವಾರ ಮಹತ್ವದ ಮಾತುಕತೆ ನಡೆಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್, ಸಚಿವ ಗೋವಿಂದ ಕಾರಜೋಳ ಜತೆ ಅಮಿತ್ ಶಾ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಈಗಾಗಲೇ ಕೈಗೊಂಡಿರುವ ಜನಸ್ಪಂದನೆ ಯಾತ್ರೆ, ಪ್ರಮುಖ ಕಾರ್ಯಕ್ರಮಗಳ ಜಾರಿ ಕುರಿತು ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಮಾಹಿತಿ ನೀಡಿದರು. ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ನಳಿನ್ಕುಮಾರ್ ಕಟೀಲು ವಿವರಿಸಿದರು ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆ ವಿಚಾರವೂ ಇದೇ ಸಂದರ್ಭದಲ್ಲಿ ಪ್ರಸ್ತಾವವಾಗಿ ಖಾಲಿ ಉಳಿದಿರುವ ಆರು ಸ್ಥಾನ ಭರ್ತಿ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ