ಮಣಿಪಾಲ ಉದಯವಾಣಿ ಕಚೇರಿಗೆ ಸಿಎಂ ಬೊಮ್ಮಾಯಿ ಭೇಟಿ

ಉದಯವಾಣಿ ಎಲ್ಲರ ಮನೆಯ, ಮನದ ಮಾತಾಗಿದೆ

Team Udayavani, Apr 11, 2022, 9:31 PM IST

1-dsdsdsad

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆ ಮಣಿಪಾಲದ ಉದಯವಾಣಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

ಅತಿಥಿ ಸಂಪಾದಕರಾಗಿ ಆಗಮಿಸಿದ ಸಿಎಂ ಸಮಾರಂಭವನ್ನುದ್ದೇಶಿಸಿ ಮಾತನಾಡಿ, ಉದಯವಾಣಿ ಈ ಭಾಗದ ಜನರ ಧ್ವನಿಯಾಗಿದೆ. ಕರಾವಳಿ ಕರ್ನಾಟಕದಿಂದ ಪ್ರಾರಂಭವಾಗಿ ಇಡೀ ಕರ್ನಾಟಕವನ್ನು ವ್ಯಾಪಿಸಿದೆ. ಎಲ್ಲರ ಮನೆಯ ಮಾತಾಗಿದೆ, ಮನದ ಮಾತಾಗಿದೆ ಎಂದರು.

ಪತ್ರಿಕೆಯ ವೈಶಿಷ್ಟ್ಯತೆಯ ಗುಟ್ಟು ವೈಶಿಷ್ಟ್ಯ ಸಂಪಾದಿಸಬೇಕು, ನಾನು ಪತ್ರಿಕೆ ನಡೆಸುತ್ತಿಲ್ಲ.ಆದರೆ ನಾನೊಬ್ಬ ಒಳ್ಳೆಯ ಓದುಗ, ಉದಯವಾಣಿ ವಸ್ತು ನಿಷ್ಠ ವರದಿ ನೀಡುತ್ತದೆ, ಈಗ ಹಲವಾರು ಪತ್ರಿಕೆಗಳಿವೆ. ಓದುಗರಿಗೆ ಬಹಳ ಆಯ್ಕೆಗಳಿವೆ. ಓದುಗ ವಿಶ್ವಾಸ ಉಳಿಸಿಕೊಂಡ ಪತ್ರಿಕೆ ಯ ಮೇಲೆ ಅವಲೋಕನ ಮಾಡಬಹುದಾಗಿದೆ. ಉದಯವಾಣಿ ವರದಿಗಳಲ್ಲಿ ಪರ ವಿರೋಧವಿಲ್ಲದ ವರದಿಗಳನ್ನು ಕಾಣಬಹುದಾಗಿದೆ ಎಂದರು.

ವಿಭಿನ್ನ ವಿಶ್ಲೇಷಣೆ ಸತ್ಯವನ್ನು ಹೇಳಬೇಕು, ವಸ್ತು ನಿಷ್ಠವಾಗಿರಬೇಕು, ಅತ್ಯಂತ ಅಮೂಲ್ಯವಾಗಿ ಹೊರ ಹೊಮ್ಮಿದ ಪತ್ರಿಕೆ ಉದಯವಾಣಿ. ೫೦ ವರ್ಷ ಪತ್ರಿಕೆ ಯಶಸ್ವಿಯಾಗಿ ನಡೆಸುವುದು ಸುಲಭದ ಮಾತಲ್ಲ.ನಿಮ್ಮದೇ ಆದ ಛಾಪನ್ನು ಪತ್ರಿಕಾ ರಂಗದಲ್ಲಿ ಮೂಡಿಸಿದ್ದೀರಿ ಎಂದರು.

ರಾಷ್ಟ್ರ ಮೆಚ್ಚಿದ ಬನ್ನಂಜೆ ಗೋವಿಂದ ಆಚಾರ್ಯ ಅಂತಹ ತತ್ವಜ್ಞಾನಿಗಳು ಇಲ್ಲಿ ಸಂಪಾದಕರಾಗಿ ಕೆಲಸ ಮಾಡಿದ್ದು ಪತ್ರಿಕೆಯ ಗುಣಮಟ್ಟ ತೋರಿಸುತ್ತದೆ ಎಂದರು.

ಉದಯವಾಣಿ ಸುದ್ದಿಕೊಡುವ ಮಾಧ್ಯಮ ಅಲ್ಲ ಮಾರ್ಗದರ್ಶನ ಮಾಡುವ ಮಾಧ್ಯಮ. ನಾನು ಉದಯವಾಣಿಯ ವರದಿಗಳನ್ನು ನೋಡಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದೇನೆ ಎಂದರು.

ರಾಜಕಾರಣಿ ಮಾಧ್ಯಮ ಇಲ್ಲದೆ ಬೆಳೆಯಲು ಸಾಧ್ಯವಿಲ್ಲ, ಅಂತೆಯೇ ಮಾಧ್ಯಮಕ್ಕೂ ರಾಜಕಾರಣಿಗಳ ಅವಶ್ಯಕತೆ ಇದೆ. ನಮಗೆ ಅವಿನಾಭಾವ ಸಂಬಂಧ ಇದೆ. ಟೀಕೆ ಮಾಡಿದಾಗ ಸಮನಾಗಿ ತೆಗೆದುಕೊಂಡು ಹೋಗಬೇಕು. ನಾವು ಹೇಳಿದ್ದನ್ನ ಪ್ರಕಟ ಮಾಡಿ ನಮ್ಮ ಅಭಿಪ್ರಾಯ ಜನರಿಗೆ ತಲುಪಿಸುವ ಕಾರ್ಯ ಆಗಬೇಕು, ಹಾಗಾದಾಗ ಆರೋಗ್ಯಕರವಾದ ಸಮಾಜ ನಿರ್ಮಾಣ ಆಗುತ್ತದೆ. ಉದಯವಾಣಿಯಿಂದ ಕರ್ನಾಟಕದ ಉದಯವಾಗಲಿ ಎಂದರು.

ಉದಯವಾಣಿ ಸಂಸ್ಥೆಯ ಪರವಾಗಿ ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಪೈ, ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್ . ಪೈ, ಮಣಿಪಾಲ ಟೆಕ್ನಾಲಜಿಸ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಗೌತಮ್‌ ಪೈ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ನ ಸಿಇಒ& ಎಂಡಿ ವಿನೋದ್ ಕುಮಾರ್, ಸಂಪಾದಕರಾದ ಅರವಿಂದ ನಾವಡ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ಸಿಎಂ ಜತೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮ ರಾವ್ ಸೇರಿ ಹಿರಿಯ ಅಧಿಕಾರಿಗಳು ಆಗಮಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.