ಸಾಲ ಮಾಡಿ ತುಪ್ಪ ತಿಂದಿಲ್ಲ : ಸಿಎಂ ಯಡಿಯೂರಪ್ಪ


Team Udayavani, Mar 25, 2021, 7:10 AM IST

ಸಾಲ ಮಾಡಿ ತುಪ್ಪ ತಿಂದಿಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಪಕ್ಷ ಕಾಂಗ್ರೆಸ್‌ ಸದಸ್ಯರ ಧರಣಿ, ಧಿಕ್ಕಾರ ಘೋಷಣೆ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕರ್ನಾಟಕ ಧನವಿನಿಯೋಗ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಅನುಮೋದನೆ ನೀಡುವ ಮೂಲಕ 2,46,207 ಕೋಟಿ ರೂ. ಗಾತ್ರದ 2021-22ನೇ ಸಾಲಿನ ಆಯವ್ಯಯಕ್ಕೆ ಒಪ್ಪಿಗೆ ಪಡೆದಿದ್ದಾರೆ.

“ನಾವು ಸಾಲ ಪಡೆದು ತುಪ್ಪ ತಿಂದಿಲ್ಲ, ಮೋಜು ಅಥವಾ ಔತಣಕ್ಕಾಗಿ ಸಾಲದ ಹಣ ಬಳಸಿಲ್ಲ’ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ, ಸಾಲ ಮಾಡದೇ ಯಾವ ಸರಕಾರಗಳೂ ಯೋಜನೆ ಗಳನ್ನು ಅನುಷ್ಠಾನಗೊಳಿಸಿದ ಉದಾಹರಣೆ ಇಲ್ಲ ಎಂದು ಒತ್ತಿ ಹೇಳಿದ್ದಾರೆ.

ಯಾವುದೇ ಹೊಸ ತೆರಿಗೆ, ಸರ್‌ಚಾರ್ಜ್‌, ಉಪಕರ ಹಾಕಿಲ್ಲ. ಪ್ರತಿ ಜಿಲ್ಲೆಗೊಂದು ಹೊಸ ಯೋಜನೆ ಘೋಷಿಸಲಾಗಿದ್ದು, 2021-22ನೇ ಸಾಲಿನ ಆಯವ್ಯಯ ಯಶಸ್ವಿಯಾಗಿ ಜಾರಿ ಯಾಗು ವಂತೆ ಅಗತ್ಯವಿರುವ ಎಲ್ಲ ಪ್ರಾಮಾಣಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಿತ್ತೀಯ ಕೊರತೆ ಇಳಿಕೆಗೆ ಪ್ರಯತ್ನ. ಮಂಜೂ ರಾದ ಹುದ್ದೆಗಳನ್ನು ಪರಾಮರ್ಶಿಸಿ ಆಡಳಿ ತಾತ್ಮಕ ವಾಗಿ ಅಗತ್ಯವಿರುವ ಹುದ್ದೆಗಳನ್ನಷ್ಟೇ ಹಂತ ಹಂತವಾಗಿ ನೇಮಕ. ನಾನಾ ಇಲಾಖೆಗಳ ಸೇವೆ ಗಳಿಗೆ ವಿಧಿಸುವ ಶುಲ್ಕ ಪರಿಷ್ಕರಣೆ ಮೂಲಕ ತೆರಿಗೆ ಯೇತರ ಆದಾಯ ಹೆಚ್ಚಳಕ್ಕೆ ಒತ್ತು ಸೇರಿದಂತೆ ಇತರೆ ಭರವಸೆಗಳನ್ನು ನೀಡುವ ಮೂಲಕ ಯಡಿಯೂರಪ್ಪ ಉಭಯ ಸದನಗಳಲ್ಲಿ ಆಯವ್ಯಯಕ್ಕೆ ಅನುಮೋದನೆ ಪಡೆದುಕೊಂಡರು. ಹಾಗೆಯೇ ಧರಣಿನಿರತ ಕಾಂಗ್ರೆಸ್‌ ಸದಸ್ಯರ ನಡೆಯನ್ನೂ ಖಂಡಿಸಿದ ಯಡಿಯೂರಪ್ಪ, ಜನ ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಮಂತ್ರದಂಡ ಇರುವುದಿಲ್ಲ
ಹಿಂದೆಂದೂ ಕಂಡರಿಯದ ವಿಶ್ವವ್ಯಾಪಿ ಸಾಂಕ್ರಾಮಿಕ ರೋಗವು ಅನಿರೀಕ್ಷಿತವಾಗಿ ಬಂದೆರಗಿದಾಗ ಸರಕಾರದ ಬಳಿ ದಿಢೀರ್‌ ಪರಿಹಾರ ನೀಡಲು ಯಾವುದೇ ಮಂತ್ರದಂಡ ಇರುವುದಿಲ್ಲ. ಇಲ್ಲವೇ ಸರಕಾರದ ಬೊಕ್ಕಸ ಅಕ್ಷಯಪಾತ್ರೆಯೇನೂ ಅಲ್ಲ ಎಂಬುದು ವಿಪಕ್ಷದವರಿಗೆ, ಆಡಳಿತ ಪಕ್ಷದವರಿಗೆ ತಿಳಿದಿದೆ ಎಂದೂ ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.